Advertisement

ಡಿಕೆಶಿ ಗೂಂಡಾಗಿರಿ: ಯತ್ನಾಳ

11:41 PM Jul 06, 2019 | Team Udayavani |

ಬೆಳಗಾವಿ: ಸಚಿವ ಡಿ.ಕೆ.ಶಿವಕುಮಾರ್‌ರ ಗೂಂಡಾಗಿರಿ ಹೆಚ್ಚಾಗಿದೆ. ಸ್ಪೀಕರ್‌ ಕೊಠಡಿಗೆ ಹೋಗಿ ಅವರು ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳನ್ನು ಹರಿದಿದ್ದು ಸರಿಯಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ದೂರಿದರು.

Advertisement

ನಗರದಲ್ಲಿ ಮಾತನಾಡಿ, ಡಿಕೆಶಿ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಬೆಂಗಳೂರಿನಲ್ಲಿ ತನ್ನ ಮೇಲೆ ಹಲ್ಲೆ ನಡೆಸಲು ಗೂಂಡಾಗಳನ್ನು ಬಿಟ್ಟಿದ್ದರು. ನಾನು ಕೋರ್ಟ್‌ಗೆ ಹೋದಾಗ ಗೂಂಡಾಗಿರಿ ನಡೆಸಿದ್ದರು. ಪೊಲೀಸರ ರಕ್ಷಣೆಯೊಂದಿಗೆ ಅಲ್ಲಿಂದ ಹೊರ ಬಂದಿದ್ದೆ.

ಡಿಕೆಶಿ ಗೂಂಡಾಗಿರಿ ಹೀಗೆಯೇ ಮುಂದುವರಿದರೆ ನಮ್ಮ ಸರ್ಕಾರ ಬಂದ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ರಾಜೀನಾಮೆ ನೀಡಿರುವ ಎಲ್ಲಾ ಶಾಸಕರಿಗೆ ಭದ್ರತೆ ನೀಡಬೇಕು. ಮುಂದಿನ ದಿನಗಳಲ್ಲಿ ಇನ್ನೂ ಹಲವು ಶಾಸಕರು ರಾಜೀನಾಮೆ ನೀಡುತ್ತಾರೆ.

ಇದರಿಂದ ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳೇ ಖಾಲಿಯಾಗುತ್ತವೆ ಎಂದೆನಿಸುತ್ತೆ. ನಿರೀಕ್ಷೆ ಮಾಡಲಾಗದವರೂ ರಾಜೀನಾಮೆ ಕೊಡುತ್ತಿದ್ದಾರೆ. ರಾಮಲಿಂಗಾರೆಡ್ಡಿ ಅಂತಹವರೂ ಕಾಂಗ್ರೆಸ್‌ ಬಿಡುತ್ತಿದ್ದಾರೆ. ಬಿಜೆಪಿ ಆಪರೇಷನ್‌ ಕಮಲ ಮಾಡುತ್ತಿಲ್ಲ. ಕಾಂಗ್ರೆಸ್‌-ಜೆಡಿಎಸ್‌ನವರೇ ಆಪರೇಷನ್‌ ಮಾಡಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಯಡಿಯೂರಪ್ಪ ಪ್ರಮಾಣ ವಚನ ಯಾವಾಗ ಎಂಬ ಪ್ರಶ್ನೆಗೆ, ನಾನು ಜ್ಯೋತಿಷಿ ಅಲ್ಲ. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕೂಡಲೇ ಫ್ಯಾಕ್ಸ್‌ ಮೂಲಕ ರಾಜೀನಾಮೆ ಕೊಡಬೇಕು. ಬಿ.ಎಸ್‌.ಯಡಿಯೂರಪ್ಪ ಸಿಎಂ ಆಗುವುದು ನಿಶ್ಚಿತ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next