Advertisement

ಡಿಕೆಶಿ, ಸಿದ್ದು ಕಾಂಗ್ರೆಸ್‌ ಜೋಡೆತ್ತು

06:20 AM Jul 03, 2020 | Lakshmi GovindaRaj |

ಬಂಗಾರಪೇಟೆ: ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜೋಡೆತ್ತು ಗಳಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್‌ ಅನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸಲಾಗು ವುದು ಎಂದು ಶಾಸಕ  ಎಸ್‌.ಎನ್‌. ನಾರಾಯಣಸ್ವಾಮಿ ಹೇಳಿದರು. ಪಟ್ಟಣದ ಕಾಂಗ್ರೆಸ್‌ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪದಗ್ರಹಣ, ಸಂವಿಧಾನ ಪ್ರತಿಜ್ಞಾ ವಿಧಿ ಓದು ಕಾರ್ಯಕ್ರಮ ವೀಕ್ಷಣೆಗೆ ಚಾಲನೆ ನೀಡಿ ಮಾತನಾಡಿದರು.

Advertisement

ಪಕ್ಷದ ಟ್ರಬಲ್‌ ಶೂಟರ್‌ ಡಿ.ಕೆ.ಶಿವಕುಮಾರ್‌ ಅಧ್ಯಕ್ಷರಾ ಗಿರು ವುದರಿಂದ ಕಾರ್ಯಕರ್ತರಲ್ಲಿ ನವಚೈತನ್ಯ ಮೂಡಿದೆ. ಮುಂಬರುವ ಗ್ರಾಪಂ, ತಾಪಂ ಹಾಗೂ ಜಿಪಂ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡಿ, ಗೆಲ್ಲಿಸಿ, ಸೂಕ್ತ  ಸ್ಥಾನಮಾನ ನೀಡಲಾಗುವುದು ಎಂದು ಭರವಸೆ ನೀಡಿದರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಮಾತನಾಡಿ, ಜಿಲ್ಲೆಯ 187 ಸ್ಥಳಗಳಲ್ಲಿ 200 ಕಾರ್ಯಕರ್ತರ ಹಾಜರಿಯಲ್ಲಿ ಡಿಕೆಶಿ ಪದಗ್ರಹಣ ಕಾರ್ಯಕ್ರಮದ ನೇರ ಪ್ರಸಾರ ಯಶಸ್ವಿಯಾಗಿ  ನಡೆಸಲಾಗಿದೆ ಎಂದು ತಿಳಿಸಿದರು.

ತಾಲೂಕು ಕೆಪಿಸಿಸಿ ಉಸ್ತು ವಾರಿ ಅಂಬರೀಶ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪಾರ್ಥಸಾರಥಿ, ಕೋಚಿಮುಲ್‌ ನಿರ್ದೇಶಕ ಜಯಸಿಂಹ ಕೃಷ್ಣಪ್ಪ, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಫ್ರಾನ್ಸಿಸ್‌, ಎನ್‌ಎಸ್‌ ಯುಐ  ಅಧ್ಯಕ್ಷ ರಾಕೇಶ್‌ ಕುಮಾರ್‌, ಪುರಸಭೆ ಸದಸ್ಯರಾದ ಸಾದಿಕ್‌ ಪಾಷಾ, ಕಪಾಲಿ ಶಂಕರ್‌, ಕುಂಬಾರಪಾಳ್ಯ ಮಂಜುನಾಥ್‌, ಗೋವಿಂದ, ಎಸ್‌. ವೆಂಕಟೇಶ್‌, ಶಾರದ ವಿವೇಕಾನಂದ, ಮಾಜಿ ಅಧ್ಯಕ್ಷೆ ಭಾಗ್ಯಮ್ಮ, ಎಂ. ನಾರಾಯಣ್‌, ಕೆ.ಜಿ.ನಂಜಪ್ಪ, ಕರವೇ ಚಲಪತಿ, ಕಾರಹಳ್ಳಿ  ಹರೀಶ್‌, ಮಂಜುನಾಥ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next