Advertisement

ನಲಪಾಡ್‌ ಹಲ್ಲೆ ಪ್ರಕರಣ ಡಿಕೆಶಿ ಸಂಧಾನ

11:15 PM Mar 17, 2020 | Team Udayavani |

ಬೆಂಗಳೂರು: ಶಾಂತಿನಗರ ಶಾಸಕ ಎನ್‌.ಎ.ಹ್ಯಾರಿಸ್‌ ಪುತ್ರ ಮೊಹಮದ್‌ ನಲಪಾಡ್‌, ಸಚಿನ್‌ ಎನ್ನುವವರ ಮೇಲೆ ನಡೆಸಿದ ಹಲ್ಲೆ ಪ್ರಕರಣವನ್ನು ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಂಧಾನ ಮಾಡಿಸುವ ಮೂಲಕ ಅಂತ್ಯಗೊಳಿಸಿದ್ದಾರೆ.

Advertisement

ಭಾನುವಾರ ಸಂಜೆ ನಡೆದ ಗಲಾಟೆಯಲ್ಲಿ ಸಚಿನ್‌ ಮೇಲೆ ಮೊಹಮದ್‌ ನಲಪಾಡ್‌ ಹಲ್ಲೆ ನಡೆಸಿದ್ದಾರೆಂದು ಅವರ ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣವನ್ನು ರಾಜಿ ಸಂಧಾನ ಮಾಡಿಸುವಂತೆ ಶಾಸಕ ಹ್ಯಾರಿಸ್‌, ಡಿ.ಕೆ.ಶಿವಕುಮಾರ್‌ ಅವರಲ್ಲಿ ಮನವಿ ಮಾಡಿದ್ದರಿಂದ ಸೋಮವಾರ ರಾತ್ರಿ ನಲಪಾಡ್‌ ಹಾಗೂ ಸಚಿನ್‌ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಸಂಧಾನ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಸಚಿನ್‌ ಬಳಿ ನಲಪಾಡ್‌ ಕ್ಷಮೆ ಕೋರಿದ್ದಾರೆ. ಅಲ್ಲದೆ ನಲಪಾಡ್‌ಗೆ ಎಚ್ಚರಿಕೆ ನೀಡಿದ್ದು, ಮುಂದೆ ಈ ರೀತಿಯ ಗಲಾಟೆ ಮಾಡಿಕೊಂಡರೆ ಪಕ್ಷದಿಂದ ಉಚ್ಚಾಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next