Advertisement

ರಾಜೀವ್ ಹಂತಕರನ್ನು ಬಿಡುಗಡೆಗೊಳಿಸುತ್ತೇವೆ;ಡಿಎಂಕೆ ಪ್ರಣಾಳಿಕೆ ಭರವಸೆ!

08:04 AM Mar 19, 2019 | Team Udayavani |

ಚೆನ್ನೈ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಡಿಎಂಕೆ(ದ್ರಾವಿಡ ಮುನ್ನೇತ್ರ ಕಳಗಂ) ಪಕ್ಷದ ಅಧ್ಯಕ್ಷ ಎಂಕೆ ಸ್ಟಾಲಿನ್ ಮಂಗಳವಾರ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದು, ಸಣ್ಣ ಮತ್ತು ಮಧ್ಯಮ ವರ್ಗದ ರೈತರ ಎಲ್ಲಾ ಸಾಲ ಹಾಗೂ ವಿದ್ಯಾಭ್ಯಾಸ ಸಾಲವನ್ನು ಮನ್ನಾ ಮಾಡುವುದಾಗಿ ಭರವಸೆ ನೀಡಿದೆ.

Advertisement

ಡಿಎಂಕೆ ಪ್ರಣಾಳಿಕೆಯಲ್ಲಿ ಏನಿದೆ?

*1964ರ ಇಂಡೋ-ಶ್ರೀಲಂಕಾ ಒಪ್ಪಂದದ ಪ್ರಕಾರ ಶ್ರೀಲಂಕಾದ ಶಿಬಿರದಲ್ಲಿ ನಿರಾಶ್ರಿತರಾಗಿ ಬದುಕುತ್ತಿದ್ದವರಿಗೆ ಭಾರತೀಯ ಪೌರತ್ವ ಕೊಡುತ್ತೇವೆ.

*ಅರ್ಧಕ್ಕೆ ನಿಂತು ಹೋಗಿರುವ ಸೇತುಸಮುದ್ರಂ ಯೋಜನೆಯನ್ನು ಪುನರಾರಂಭಗೊಳಿಸುತ್ತೇವೆ.

*ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆಗೊಳಿಸುತ್ತೇವೆ

Advertisement

*ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ರೈಲು ಪ್ರಯಾಣ ಉಚಿತ

*ಮಧುರೈ, ತಿರುಚ್ಚಿ, ಕೊಯಮತ್ತೂರು ಹಾಗೂ ಸೇಲಂನಂತಹ ನಗರಗಳಿಗೆ ಮೆಟ್ರೋ ರೈಲು ವ್ಯವಸ್ಥೆ

*ಆದಾಯ ತೆರಿಗೆ ವಿನಾಯ್ತಿ ಮಿತಿಯನ್ನು 5ಲಕ್ಷದಿಂದ 8 ಲಕ್ಷಕ್ಕೆ ಏರಿಸುತ್ತೇವೆ.

*ವಿಕಲಚೇತನ ಮಹಿಳೆಯರಿಗೆ ವಾರ್ಷಿಕವಾಗಿ ಆದಾಯ ತೆರಿಗೆ ವಿನಾಯ್ತಿಯ ಮಿತಿಯನ್ನು 10ಲಕ್ಷಕ್ಕೆ ಏರಿಕೆ.

Advertisement

Udayavani is now on Telegram. Click here to join our channel and stay updated with the latest news.

Next