Advertisement

ಕರುಣಾನಿಧಿ ಬಿಪಿ ಏರುಪೇರು; ಕಾವೇರಿ ಆಸ್ಪತ್ರೆಗೆ ಶಿಫ್ಟ್ 

09:55 AM Jul 28, 2018 | Team Udayavani |

ಚೆನ್ನೈ: ಜ್ವರ, ಮೂತ್ರಕೋಶ ಸೋಂಕಿನಿಂದ ಬಳಲುತ್ತಿರುವ ಡಿಎಂಕೆ ಅಧ್ಯಕ್ಷ ಎಂ.ಕರುಣಾನಿಧಿ (94) ಅವರ ರಕ್ತದೊತ್ತಡದಲ್ಲಿ ಏರುಪೇರಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಶನಿವಾರ ನಸುಕಿನ ವೇಳೆ ಕಾವೇರಿ ಆಸ್ಪತ್ರಗೆ ದಾಖಲಿಸಲಾಗಿದೆ. 

Advertisement

ಸದ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸುಧಾರಿಸುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. 

ಪ್ರಧಾನಿ ನರೇಂದ್ರ ಮೋದಿ , ಸಿಎಂ ಕುಮಾರಸ್ವಾಮಿ ಸೇರಿದಂತೆ ಗಣ್ಯರು ಕರುಣಾನಿಧಿ ಅವರ ಕುಟುಂಬ ಸದಸ್ಯರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು. ಹಲವು ತಮಿಳುನಾಡಿನ ಪ್ರಮುಖ ರಾಜಕಾರಣಿಗಳು ಮತ್ತು ನಟರು ನಿವಾಸಕ್ಕೆ ದೌಡಾಯಿಸಿ ಆರೋಗ್ಯ ವಿಚಾರಿಸಿದ್ದರು. 

ಗೋಪಾಲಪುರಂನ ನಿವಾಸದ ಹೊರಗೆ ನೂರಾರು ಬೆಂಬಲಿಗರು, ಅಭಿಮಾನಿಗಳು ಜಮಾಯಿಸಿದ ಹಿನ್ನಲೆಯಲ್ಲಿ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿತ್ತು. 

Advertisement

Udayavani is now on Telegram. Click here to join our channel and stay updated with the latest news.

Next