Advertisement

ಮಕ್ಕಳ ಕಳ್ಳರ ವದಂತಿಗಳಿಂದ ಆತಂಕಗೊಳ್ಳಬೇಡಿ :ಸಿಎಂ ಎಚ್‌ಡಿಕೆ ಮನವಿ

02:59 PM May 24, 2018 | Team Udayavani |

ತುಮಕೂರು: ರಾಜ್ಯದ ಜನತೆ ಮಕ್ಕಳ ಕಳ್ಳರ ವದಂತಿಗಳ ಬಗ್ಗೆ ಆತಂಕಗೊಳ್ಳಬಾರದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. 

Advertisement

ಸಿದ್ದಗಂಗಾ ಮಠದಲ್ಲಿ ಡಾ.ಶಿವಕುಮಾರ ಶ್ರೀಗಳ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಕ್ಕಳ ಕಳ್ಳರ ವದಂತಿಗಳಿಂದಾಗಿ ಬೆಂಗಳೂರಿನಲ್ಲಿ ಓರ್ವನ ಹತ್ಯೆ ನಡೆದಿದೆ. ಈ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಯಾರೂ ವದಂತಿಗಳಿಗೆ ಕಿವಿ ಕೊಡಬಾರದು ಎಂದರು.

ಕಠಿಣ ಕ್ರಮ ಎಚ್ಚರಿಕೆ 
ಬೆಂಗಳೂರು ಪಶ್ಚಿಮ ವಲಯ ಡಿಸಿಪಿ ರವಿ ಚನ್ನಣ್ಣನವರ್‌ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆತ್ತಿಕೊಳ್ಳಲು ನಾವು ಅವಕಾಶ ನೀಡುವುದಿಲ್ಲ. ಚಾಮರಾಜ ನಗರದಲ್ಲಿ  ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 14 ಮಂದಿಯನ್ನು ವಶಕ್ಕೆ ಪಡೆದಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next