Advertisement

Railway Track ಉನ್ನತೀಕ ರಣದಿಂದ ಪ್ರಯಾಣಿಕರಿಗೆ ಸಮಸ್ಯೆಯಾಗದಿರಲಿ

10:56 PM Dec 03, 2023 | Team Udayavani |

ಉಡುಪಿ: ದಾದರ್‌ ನಿಲ್ದಾಣದಿಂದ ಮುಂಬಯಿ ಸಿಎಸ್‌ಟಿ ವರೆಗೂ ನಿರ್ವಹಣ ಹಾಗೂ ಉನ್ನತೀಕರಣ ಕಾಮಗಾರಿ ನಡೆಯುತ್ತಿರುವುದರಿಂದ ಮಂಗಳೂರು ಕಡೆಯಿಂದ ಸಿಎಸ್‌ಟಿವರೆಗೂ ಸಂಚರಿಸುವ ರೈಲು ದಾದರ್‌ನಲ್ಲೇ ಕೊನೆಗೊಳ್ಳುವುದರಿಂದ ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ.

Advertisement

ಈ ಬಗ್ಗೆ ಇಲಾಖೆ ಪ್ರಯಾಣಿಕರಿಗೆ ಸರಿಯಾದ ಮಾಹಿತಿ ಒದಗಿಸಬೇಕು ಎಂಬ ದೂರುಗಳು ಕೇಳಿಬರುತ್ತಿವೆ. ಎರಡು ಮೂರು ತಿಂಗಳಿಂದ ಈ ಪ್ರದೇಶದಲ್ಲಿ ನಿರ್ವಹಣೆ ಹಾಗೂ ಉನ್ನತೀಕರಣದ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಆರಂಭಕ್ಕೂ ಮೊದಲೇ ಸಿಎಸ್‌ಟಿಯಿಂದ ಮಂಗಳೂರಿಗೆ ಅಥವಾ ಮಂಗಳೂರಿನಿಂದ ಸಿಎಸ್‌ಟಿಗೆ ರೈಲು ಟಿಕೆಟ್‌ ಬುಕ್‌ ಮಾಡಿದವರಿಗೆ ಈಗ ಹೆಚ್ಚು ಸಮಸ್ಯೆಯಾಗುತ್ತಿದೆ.

ಪ್ರಯಾಣಿಕರಿಗೆ ಆಗುತ್ತಿರುವ ಸಮಸ್ಯೆ ತಪ್ಪಿಸಲು ಸಂಬಂಧಪಟ್ಟ ಅಧಿಕಾರಿಗಳು ಇದಕ್ಕೆ ತಾತ್ಕಾಲಿಕ ನೆಲೆಯಲ್ಲದಾದರೂ ಪರಿಹಾರ ಕಲ್ಪಿಸಬೇಕು ಎಂದು ಪ್ರಯಾಣಿಕರು ಮನವಿ ಮಾಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next