Advertisement

ಪರಿಸರಕ್ಕೆ ಹಾನಿ ಬೇಡ: ಎಚ್‌ಡಿಕೆ

11:30 AM May 21, 2018 | |

ಬೆಂಗಳೂರು: ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ವೇಳೆ ಪಟಾಕಿಗಳನ್ನು ಸಿಡಿಸಿ, ಬ್ಯಾನರ್‌, ಬಂಟಿಂಗ್ಸ್‌ಗಳನ್ನು ಕಟ್ಟಿ ಪರಿಸರಕ್ಕೆ ಹಾನಿ ಮಾಡದಂತೆ ನಿಯೋಜಿತ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ಮನವಿ ಮಾಡಿದ್ದಾರೆ.

Advertisement

ನಾನು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುತ್ತಿರುವುದು ಜನತೆ, ಕಾರ್ಯಕರ್ತರು, ಅಭಿಮಾನಿಗಳಿಗೆ ಹರ್ಷ ತಂದಿರಬಹುದು. ಈ ಸಂಭ್ರಮದಲ್ಲಿ ನಾನೂ ಕೂಡ ಭಾಗಿಯಾಗಿರುತ್ತೇನೆ. ಆದರೆ, ಈ ಸಂದರ್ಭದಲ್ಲಿ ‌ಟಾಕಿಗಳನ್ನು ಸಿಡಿಸಿ, ಬ್ಯಾನರ್‌, ಬಂಟಿಂಗ್ಸ್‌ಗಳನ್ನು ಕಟ್ಟಿ ಪರಿಸರಕ್ಕೆ ಹಾನಿ ಮಾಡುವುದು ನನಗಿಷ್ಟವಿಲ್ಲ.

ನನ್ನ ಕಾರ್ಯಕರ್ತರೂ ಈ ರೀತಿ ಮಾಡಬಾರದು ಎಂಬುದು ನನ್ನ ಅನಿಸಿಕೆ. ನನ್ನ ಕಾರ್ಯಕರ್ತರು ಹೋರಾಟ, ಛಲಕ್ಕೆ ಎಷ್ಟು ಹೆಸರುವಾಸಿಯೋ ಹಾಗೆಯೇ ಪರಿಸರ ಪ್ರೇಮದಲ್ಲೂ ಮೇಲ್ಪಂಕ್ತಿ ಹಾಕಿಕೊಡಲಿದ್ದಾರೆ ಎಂದು ಭಾವಿಸಿಕೊಂಡಿದ್ದೇನೆ. ನಾವು ಪರಿಸರ ಸ್ನೇಹಿಗಳಾಗೋಣ. ಪರಿಸರ ಉಳಿಸೋಣ, ರಕ್ಷಿಸೋಣ ಎಂದು ಕರೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next