Advertisement
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಬ್ಯಾರಿ ಕಲಾರಂಗ ಮಂಗಳೂರು ಸಹಯೋಗದಲ್ಲಿ ನಗರದ ಪುರಭವನದಲ್ಲಿ ಶನಿವಾರ ನಡೆದ ಬ್ಯಾರಿ ಭಾಷಾ ಕಲಾವಿದರ ಸಮಾವೇಶ “ಬ್ಯಾರಿ ಒಪ್ಪನೆ-ಕೋಲ್ಕಲಿ ಪಂತ’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಮಾತೃಭಾಷೆ ಮಾತನಾಡಲು ಹಿಂಜರಿದರೆ ಸಮಾಜದಲ್ಲಿ ಒಂದು ಹೆಜ್ಜೆ ಹಿಂದೆ ಇಟ್ಟಂತೆ. ಬ್ಯಾರಿ ಭಾಷೆಯನ್ನು ಕರಾವಳಿ ಮಾತ್ರವಲ್ಲದೆ ಮಲೆನಾಡು, ಚಿಕ್ಕಮಗಳೂರು ಸೇರಿದಂತೆ ಬೆಂಗಳೂರಿನ ಕೆಲ ಪ್ರದೇಶಗಳಲ್ಲೂ ಮಾತನಾಡುತ್ತಾರೆ. ಬ್ಯಾರಿ ಭಾಷೆಯ ಕಲೆ, ಸಂಸ್ಕೃತಿ ಉಳಿಯಬೇಕಿದೆ. ಬ್ಯಾರಿ ಸಾಹಿತ್ಯಕ್ಕೆ ಮತ್ತಷ್ಟು ಮನ್ನಣೆ ಸಿಗಬೇಕಿದೆ ಎಂದರು.
Related Articles
ಮಂಗಳೂರಿನಲ್ಲಿ ಬ್ಯಾರಿ ಭವನ ನಿರ್ಮಾಣಕ್ಕೆ ವಿಶೇಷ ಅನುದಾನ ಮಂಜೂರು ಮಾಡಬೇಕು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕರಂಬಾರ್ ಮಹಮದ್ ಅವರು ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರಿಗೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಐವನ್, ಬ್ಯಾರಿ ಭವನ ನಿರ್ಮಾಣದ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಳಿ ಚರ್ಚಿಸಿ, ಅನುದಾನ ಬಿಡುಗಡೆಗೆ ಮನವಿ ಮಾಡುತ್ತೇನೆ. ಮುಂಬರುವ ಅಧಿವೇಶನದಲ್ಲಿ ಈ ಬಗ್ಗೆ ಗಮನಸೆಳೆಯುತ್ತೇನೆ ಎಂದರು.
Advertisement