Advertisement

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

03:14 PM Apr 16, 2024 | Team Udayavani |

ಚಿಕ್ಕಮಗಳೂರು: ಈ ಬಾರಿಯ ಚುನಾವಣೆಯಲ್ಲಿ ಅತಿ ಹೆಚ್ಚು ಮತದಾನ ನಡೆಯಬೇಕು ಎಂಬ ಉದ್ದೇಶದಿಂದ ಚುನಾವಣಾ ಸಮಯದಲ್ಲಿ ಪ್ರವಾಸಿಗರಿಗೆ ಹೋಂ ಸ್ಟೇ ಮತ್ತು ರೇಸಾರ್ಟ್ ಗಳಲ್ಲಿ ಬುಕ್ಕಿಂಗ್ ನೀಡದಂತೆ ಮಾಲೀಕರಿಗೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

Advertisement

ಚುನಾವಣೆ ದಿನದಂದು ರಜೆ ನೀಡುವ ನಿಟ್ಟಿನಲ್ಲಿ ಪ್ರವಾಸಿತಾಣಗಳಿಗೆ ಅತಿ ಹೆಚ್ಚು ಪ್ರವಾಸಿಗರು ಬರುತ್ತಿರುವ ನಿಟ್ಟಿನಲ್ಲಿ ಮತದಾರರು ಮತದಾನ ಪ್ರಕ್ರಿಯೇಯಿಂದ ಹೊರಗುಳಿಯಬಾರದೆಂಬ ಉದ್ದೇಶದಿಂದ ಬುಕ್ಕಿಂಗ್ ತೆಗೆದುಕೊಳ್ಳದಂತೆ ಚಿಕ್ಕಮಗಳೂರು ಜಿಲ್ಲೆಯ ಹೋಂ ಸ್ಟೆ ಹಾಗೂ ರೇಸಾರ್ಟ್ ಮಾಲೀಕರಿಗೆ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Advertisement

Udayavani is now on Telegram. Click here to join our channel and stay updated with the latest news.

Next