Advertisement

ಸುಮಲತಾ ತಂಟೆಗೆ ಹೋಗಬೇಡಿ: ಹೊರಟ್ಟಿ

01:30 AM Mar 19, 2019 | |

ಹುಬ್ಬಳ್ಳಿ: “ಸುಲಮತಾ ಅವರ ಬಗ್ಗೆ ಆಕ್ಷೇಪಾರ್ಹ, ಅವಹೇಳನಕಾರಿ ಹೇಳಿಕೆ ನೀಡುವುದು ಸರಿಯಲ್ಲ. ಅವರನ್ನು ನಮ್ಮ ಸಹೋದರಿ ಎಂದು ತಿಳಿದು ಮಾತನಾಡಿ’ ಎಂದು ಜೆಡಿಎಸ್‌ ಮುಖಂಡರಿಗೆ ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಬುದ್ಧಿ  ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಕೆಲ ಮುಖಂಡರು ಹಾಗೂ ಕೆಲ ಬುದ್ಧಿಗೇಡಿಗಳು ಸುಮಲತಾ ಬಗ್ಗೆ
ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಯಾರನ್ನೋ ಮೆಚ್ಚಿಸಲು ಬಾಯಿಗೆ ಬಂದಂತೆ ಮಾತನಾಡಿದರೆ ಪಕ್ಷದ ಅಭ್ಯರ್ಥಿ ನಿಖೀಲ್‌ ಕುಮಾರಸ್ವಾಮಿ ಮೇಲೆ ಪರಿಣಾಮ ಬೀರುತ್ತದೆ. ಈ ವಿಚಾರದಲ್ಲಿ ನಿಖೀಲ್‌ ಹಾಗೂ ಅನಿತಾ ಕುಮಾರಸ್ವಾಮಿ ಪ್ರಬುದ್ಧರಾಗಿ ವರ್ತಿಸುತ್ತಿದ್ದಾರೆ ಎಂದರು.

ಕೈ ನಾಯಕರು ಪ್ರಯತ್ನ ಮಾಡಿ ಸುಮಲತಾ ಅವರಿಗೆ ಬೆಂಗಳೂರು ಅಥವಾ ಮೈಸೂರು ಭಾಗದಲ್ಲಿ ಅವಕಾಶ ಕಲ್ಪಿಸಿದ್ದರೆ ಇಂತಹ ಗೊಂದಲಗಳು ಸೃಷ್ಟಿಯಾಗುತ್ತಿರಲಿಲ್ಲ. ಇದೀಗ ಸುಮಲತಾ ಅವರಿಗೆ ಟಿಕೆಟ್‌ ನೀಡುವುದಿಲ್ಲ ಎಂದು ಕಾಂಗ್ರೆಸ್‌ ನಾಯಕರು ಸ್ಪಷ್ಟಪಡಿಸಿರುವಾಗ ಕಾಂಗ್ರೆಸ್‌ ಅವರಿಗೆ ಬೆಂಬಲ ನೀಡುತ್ತದೆ ಎನ್ನುವುದರಲ್ಲಿ ಅರ್ಥವಿಲ್ಲ. ಮೈತ್ರಿ ಧರ್ಮದ ಪ್ರಕಾರ ಮಂಡ್ಯ ಕ್ಷೇತ್ರ ಜೆಡಿಎಸ್‌ಗೆ ದೊರಕಿದ್ದು, ಕಾಂಗ್ರೆಸ್‌ ನಾಯಕರು ಸಂಪೂರ್ಣ ಬೆಂಬಲ ನೀಡಲಿದ್ದಾರೆ ಎಂದರ

Advertisement

Udayavani is now on Telegram. Click here to join our channel and stay updated with the latest news.

Next