Advertisement

ಶೃಂಗೇರಿಗೆ ಭೇಟಿ ನೀಡಿದ್ದಕ್ಕೆ ವಿಶೇಷ ಅರ್ಥ ಬೇಡ: ಎಚ್‌ಡಿಡಿ

06:45 AM Sep 23, 2018 | Team Udayavani |

ಶೃಂಗೇರಿ: ಕುಮಾರಸ್ವಾಮಿಯವರ ಆರೋಗ್ಯ ವೃದ್ಧಿಗಾಗಿ ವಿಶೇಷ ಪೂಜೆ ನೆರವೇರಿಸುತ್ತಿದ್ದು, ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದರು. 

Advertisement

ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯದಲ್ಲಿ ಅನೇಕ ತಾಲೂಕಿನಲ್ಲಿ ತೀವ್ರ ಬರಗಾಲವಿದ್ದು, ಅಲ್ಲಿ ಮಳೆಯಾಗಲಿ ಎಂದು ಜಗದ್ಗುರುಗಳು ಹಾಗೂ ದೇವರಲ್ಲಿ ಪ್ರಾರ್ಥಿಸಲಾಗಿದೆ. ನಮ್ಮ ಕುಟುಂಬ ಹಿಂದಿನಿಂದಲೂ ಪೀಠದ ಭಕ್ತರಾಗಿದ್ದು, ನಿರಂತರವಾಗಿ ಜಗದ್ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತೇವೆ ಎಂದರು. ನಂತರ ಮಾಜಿ ಪ್ರಧಾನಿ ಹಾಗೂ ಸಚಿವ ರೇವಣ್ಣ ಬೆಟ್ಟದ ಶ್ರೀ ಮಲಹಾನಿಕರೇಶ್ವರಸ್ವಾಮಿ ಸನ್ನಿಧಿಗೆ ತೆರಳಿ ಪೂಜೆ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next