Advertisement

ಮನೆಯಿಂದ ಸಿಎಂ ಹೊರಗೆ ಕಾಲಿಡದಂತೆ ಮಾಡುವೆ!

06:50 AM Jan 15, 2018 | Team Udayavani |

ಸರ್ಜಾಪುರ: “ಬಿಜೆಪಿ ಹಿರಿಯ ಮುಖಂಡರು ನನಗೆ ಅವಕಾಶ ನೀಡಿದರೆ ರಾಜ್ಯದಲ್ಲಿ ಈ ಬಾರಿ ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತಂದೇ ತರುತ್ತೇನೆ’ ಎಂದು ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ. 

Advertisement

ಬೆಂಗಳೂರು ನಗರ ಜಿಲ್ಲೆ ಆನೇಕಲ್‌ ತಾಲೂಕಿನ ಸರ್ಜಾಪುರ ಸಮೀಪದ ದೊಮ್ಮಸಂದ್ರದಲ್ಲಿ ಬಿಜೆಪಿ ರೈತ ಮೋರ್ಚಾ ಭಾನುವಾರ ಏರ್ಪಡಿಸಿದ್ದ ಸಂಕ್ರಾಂತಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನೆಯಿಂದ ಹೊರಗೆ ಹೆಜ್ಜೆ ಕೂಡ ಇಡದಂತೆ ಮಾಡುತ್ತೇನೆ’ ಎಂದು ಸವಾಲು ಹಾಕಿದರು.

“ನಾನು 43 ತಿಂಗಳ ಕಾಲ ಜೈಲುವಾಸ ಅನುಭವಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್‌ನ ಇತರ ಪ್ರಮುಖ, ದುಷ್ಟ ಮುಖಂಡರೇ ಕಾರಣ. ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದ್ದಾಗ ನಾನು ಸರ್ಕಾರದ ಒಂದು ಲಕ್ಷ ಕೋಟಿ ರೂ. ಹಣ ಲೂಟಿ ಮಾಡಿದ್ದೇನೆಂದು ಆರೋಪಿಸಿ, ನನ್ನ ಮೇಲೆ ಇಲ್ಲಸಲ್ಲದ 116 ಮೊಕದ್ದಮೆಗಳನ್ನು ದಾಖಲಿಸಿ ಜೈಲಿಗೆ ಕಳಿಸಿದರು.

ಆದರೆ, ನನ್ನಿಂದ ಒಂದು ರೂಪಾಯಿ ಕೂಡ ವಸೂಲಿ ಮಾಡಲು ಸಾಧ್ಯವಾಗಲಿಲ್ಲ. ನನ್ನನ್ನು ಪತ್ನಿ ಮತ್ತು ಮಕ್ಕಳಿಂದ ದೂರ ಮಾಡಿದ ಕಾಂಗ್ರೆಸ್ಸಿಗರಿಗೆ ತಕ್ಕ ಶಾಸ್ತಿ ಆಗಲಿದೆ’ ಎಂದು ಹಿಡಿ ಶಾಪ ಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next