Advertisement
ಆದಿ ಕವಿ ಮಹರ್ಷಿ ವಾಲ್ಮೀಕಿ ಗುರುಗಳ ಜಯಂತೋತ್ಸವ ಅಂಗವಾಗಿ ನಗರದ ಗಿರಿಯಮ್ಮ ವೃತ್ತದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ತಾಲೂಕು ಬಹುಜನ ವಿಧ್ಯಾರ್ಥಿ ಸಂಘ ಬಿವಿಎಸ್ ವತಿಯಿಂದ ಹಮ್ಮಿಕೊಂಡಿದ್ದ 2018-19 ನೇ ಸಾಲಿನ ಪ್ರತಿಭಾವಂತ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
Related Articles
Advertisement
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಎಲ್.ಎನ್ ನಾರಾಯಣಸ್ವಾಮಿ ಅವರು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಉತ್ತಮ ಕಾರ್ಯ. ಶಿಕ್ಷಣ ಪ್ರತಿಯೊಬ್ಬರಿಗೂ ಅಗತ್ಯವಾಗಿದ್ದು, ಬಡತನದ ನಡುವೆಯೂ ವಿದ್ಯಾಭ್ಯಾಸ ಮಾಡಿ ಉತ್ತಮ ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುಸ್ಕಾರಅನುಕೂಲವಾಗಲಿದೆ ಎಂದರು.
ಬಿವಿಎಸ್ ಜಿಲ್ಲಾ ಸಂಯೋಜಕ ಎಮ್.ಮಹೇಶ್ ದಾಸ್ ಮಾತನಾಡಿ, ಮಹರ್ಷಿ ವಾಲ್ಮೀಕಿ ಗುರುಗಳ ಜಯಂತೋತ್ಸವದ ಅಂಗವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುಸ್ಕಾರ ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಅನೇಕೆ ರೀತಿಯ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಎಂದು ತಿಳಿಸಿದರು.
ತಾಲೂಕು ಬಿವಿಎಸ್ ಅಧ್ಯಕ್ಷ ಕಾರಹಳ್ಳಿ ಕೇಶವ ಅಧ್ಯಕ್ಷತೆ ವಹಿಸಿದ್ದು, ಈ ವೇಳೆ ಹೈಕೋರ್ಟ್ ವಕೀಲ ಎ.ಹರಿರಾಮ್, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯಿತ್ರಿ ದೇವಿ, ಪುರಸಭೆ ನಿಕಟ ಪೂರ್ವ ಅಧ್ಯಕ್ಷ ಎಮ್. ಮೂರ್ತಿ, ತಾಪಂ ಸದಸ್ಯ ಕಾರಹಳ್ಳಿ ಶ್ರೀನಿವಾಸ್, ಗ್ರಾಪಂ ಸದಸ್ಯ ಬುಳ್ಳ ಹಳ್ಳಿ ರಾಜಪ್ಪ, ತಾಲೂಕು ವಾಲ್ಮೀಕಿ ಸಂಘದ ಅಧ್ಯಕ್ಷ ನಾಗೇಶ್ ಬಾಬು, ನಳಂದ ರೆಸಿಡೆನ್ಷಿಯಲ್ ಇಂಟರ್ ನ್ಯಾಷನಲ್ ಶಾಲೆಯ ಅಧ್ಯಕ್ಷ ಎಮ್.ಲೋಕೇಶ್,
ಪುರಸಭಾ ಸದಸ್ಯ ಬಾಲರಾಜ್, ಐಐಎಬಿಎಸ್ ಕಾಲೇಜು ಪ್ರಾಂಶುಪಾಲ ಡಾ.ತ್ರಿಪುರನೇನಿ ಜಗ್ಗಯ್ಯ, ಸಹ್ಯಾದ್ರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಬಿ.ಸಿ ರಾಘವೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ಸಹ ಪ್ರಾಧ್ಯಾಪಕ ಎಸ್.ಎನ್ ರವಿಕುಮಾರ್, ಪುರಸಭಾ ಮುಖ್ಯಧಿಕಾರಿ ಎಚ್.ಸಿ ಹನುಮಂತೇಗೌಡ, ಹಾಗೂ ಬಿವಿಎಸ್ ಘಟಕದ ಪದಾಧಿಕಾರಿಗಳು ಇದ್ದರು.