Advertisement

ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಬೇಡಿ: ಎಚ್.ಡಿ.ಕುಮಾರಸ್ವಾಮಿ

02:07 PM Oct 02, 2021 | Team Udayavani |

ಬೆಂಗಳೂರು: ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಬೇಡಿ. ಬಿಜೆಪಿ – ಕಾಂಗ್ರೆಸ್ ನಾಯಕರನ್ನು ಕೇಳಿ ನಾವು ರಾಜಕೀಯ ಮಾಡಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ತೆರಿಗೆ ಹಣ ಲೂಟಿಯಾಗುತ್ತಿದೆ. ರಾಜ್ಯದಲ್ಲಿ ಇರುವುದು ಕಮೀಷನ್ ಸರ್ಕಾರ ಎಂದು ಆರೋಪಿಸಿದರು.

ಇದನ್ನೂ ಓದಿ:ಬಿಜೆಪಿ ಬಗ್ಗೆ ಕನ್ಹಯ್ಯ ಕುಮಾರ್ ಹೇಳಿಕೆಗೆ ಸಚಿವ ಸಿ.ಟಿ.ರವಿ ಹೇಳಿದ್ದೇನು ಗೊತ್ತಾ?

ಸಿದ್ದರಾಮಯ್ಯನವರೇ, ಎತ್ತಿನಹೊಳೆ ಯೋಜನೆ ಹೆಸರಿನಲ್ಲಿ ಯಾರು ಯಾರು ಕಿಸೆ ತುಂಬಿಸಿಕೊಂಡಿದ್ದಾರೆ. ಅವರವರ ತೆವಲುಗಳಿಗೆ ಸಾವಿರಾರು ಕೋಟಿ ರೂ. ಯೋಜನೆ ವೆಚ್ಚ ಹೆಚ್ಚಿಸಲಾಗಿದೆ. ಕೋಲಾರ, ಚಿಕಬಳ್ಳಾಪುರ ಜಿಲ್ಲೆಗೆ ನಾವು ಮೋಸ ಮಾಡಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ ಎತ್ತಿನಹೊಳೆ ಯೋಜನೆ ಬಗ್ಗೆ ರಮೇಶ್ ಕುಮಾರ್ ಏನು ಹೇಳಿದರೂ ಗೊತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು.

ಕಾಂಗ್ರೆಸ್ ಐದು ವರ್ಷದಲ್ಲಿ ಏನು ಕೊಟ್ಟಿದೆ ಎಂದು ಗಾಂಧಿ ನಡಿಗೆಯಲ್ಲಿ ತಿಳಿಸಿ ಎಂದು ಕುಮಾರಸ್ವಾಮಿ ಸವಾಲು ಹಾಕಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next