Advertisement

ಇವಿಎಂ ಬೇಡ, ಬ್ಯಾಲೆಟ್‌ ಪೇಪರ್‌ಗಾಗಿ ಕಾಂಗ್ರೆಸ್‌ ಆಗ್ರಹ 

03:23 PM Dec 15, 2017 | Team Udayavani |

ಬೆಂಗಳೂರು: ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಇವಿಎಂ (ವಿದ್ಯುನ್ಮಾನ ಮತಯಂತ್ರ) ಬದಲಿಗೆ ಮತಪತ್ರಗಳನ್ನೇ ಬಳಕೆ ಮಾಡಬೇಕೆಂದು ಒತ್ತಾಯಿಸಿ  ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ  ಶುಕ್ರವಾರ ಹೇಳಿದ್ದಾರೆ. 

Advertisement

 ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಇವಿಎಂ ಮತಯಂತ್ರಗಳ ಬಗ್ಗೆ ದೇಶಾದ್ಯಂತಸಂಶಯ ವ್ಯಕ್ತವಾಗುತ್ತಿದೆ ಹೀಗಾಗಿ ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ  ಬ್ಯಾಲೆಟ್‌ ಪೇಪರ್‌ಗಳನ್ನೇ ಬಳಸಿದರೆ ಒಳ್ಳೆಯದು’ ಎಂದರು.

‘ಉತ್ತರಪ್ರದೇಶದಲ್ಲಿ ಮಾಯಾವತಿ, ಅಖೀಲೇಶ್‌ ಯಾದವ್‌, ಅಡ್ವಾಣಿ ಅವರೂ ಮತ ಯಂತ್ರಗಳ ಬಗ್ಗೆ ಸಂಶಯ ವ್ಯಕ್ತ ಪಡಿಸಿದ್ದಾರೆ. ಅಮೆರಿಕ, ಜರ್ಮನಿಯಂತ ದೇಶಗಳು ಇವಿಎಂಗೆ ಹೋಗಿ  ಈಗ ಮತ್ತೆ ಬ್ಯಾಲೆಟ್‌ ಪೇಪರ್‌ ನಲ್ಲಿ ಚುನಾವಣೆ ನಡೆಸುತ್ತಿವೆ. ಇಲ್ಲೂ ಹಾಗೇ ಆಗಬೇಕು’ ಎಂದರು. 

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಅವರೂ ಬ್ಯಾಲೆಟ್‌ ಪತ್ರಗಳ ಮೂಲಕ ಚುನಾವಣೆ ನಡೆಸಲು ಒತ್ತಾಯಿಸಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next