Advertisement

ಮಂತ್ರಾಲಯದ ಶ್ರೀ ಸುಬುಧೇಂದ್ರ ತೀರ್ಥರಿಗೆ ಗುಲ್ಬರ್ಗ ವಿ.ವಿ ಗೌರವ ಡಾಕ್ಟರೇಟ್

12:22 PM Nov 18, 2020 | sudhir |

ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರಿಗೆ ಗುಲ್ಬರ್ಗ ವಿಶ್ವವಿದ್ಯಾಲಯ ಈ ಸಾಲಿನ ಗೌರವ ಡಾಕ್ಟರೇಟ್ ನೀಡಲು ಮುಂದಾಗಿದೆ.

Advertisement

ಸುಬುಧೇಂದ್ರ ತೀರ್ಥರ ಸಾಮಾಜಿಕ ಸೇವೆ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿದ ಅಪಾರ ಸೇವೆ ಪರಿಗಣಿಸಿ ಡಾಕ್ಟರೇಟ್ ಗೆ ಆಯ್ಕೆ ಮಾಡಲಾಗಿದೆ.

ನ.20ರಂದು ನಡೆಯಲಿರುವ ವಿವಿಯ 38ನೇ ಘಟಿಕೋತ್ಸವದಲ್ಲಿ ಗೌಡಾ ಪ್ರದಾನ ಮಾಡಲಾಗುವುದು. ಶ್ರೀಗಳಿಗೆ ಡಾಕ್ಟರೇಟ್ ನೀಡಲು ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ.

ಅಪಾರ ಪಾಂಡಿತ್ಯ ಹೊಂದಿರುವ ಶ್ರೀಗಳು ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಹಾಯ ಹಸ್ತ ಚಾಚುವುದರ ಜತೆಗೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳ ನೆರವಿಗೆ ಧಾವಿಸಿದ್ದರು. ಅವರ ಸೇವೆ ಗುರತಿಸಿ ಆಯ್ಕೆ ಮಾಡಲಾಗಿದೆ ಎಂದು ಸಿಂಡಿಕೇಟ್ ಸದಸ್ಯ ಡಾ.ಶರಣಬಸವ ಪಾಟೀಲ್ ಜೋಳದಹೆಡಗಿ ತಿಳಿಸಿದ್ದಾರೆ.

ಇದನ್ನೂ ಓದಿ:ರಾಯಚೂರು- ಹೈದರಾಬಾದ್ ಮುಖ್ಯರಸ್ತೆಯಲ್ಲಿ ಟ್ರಾಫಿಕ್ ಜಾಮ್! ಪ್ರಯಾಣಿಕರ ಪರದಾಟ

Advertisement
Advertisement

Udayavani is now on Telegram. Click here to join our channel and stay updated with the latest news.

Next