ಮೊರಾದಬಾದ್: ತನ್ನ 600 ಕೋಟಿ ರೂ. ಮೌಲ್ಯದ ಆಸ್ತಿಯನ್ನು ವೈದ್ಯರೊಬ್ಬರು ಉತ್ತರ ಪ್ರದೇಶ ಸರ್ಕಾರಕ್ಕೆ ದಾನ ಮಾಡಿದ್ದಾರೆ. ಮೊರಾದಬಾದ್ ನ ಅರವಿಂದ ಗೋಯಲ್ ಅವರೇ ದಾನ ಮಾಡಿದ ವೈದ್ಯ.
ಸುಮಾರು 25 ವರ್ಷಗಳ ಹಿಂದೆ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಅರವಿಂದ ಗೋಯಲ್ ಆಸ್ತಿಯನ್ನು ದಾನ ಮಾಡಿದ ನಂತರ ಹೇಳಿದರು.
ಲಾಕ್ಡೌನ್ ಸಮಯದಲ್ಲಿ ಮೊರಾದಾಬಾದ್ನ 50 ಹಳ್ಳಿಗಳನ್ನು ದತ್ತು ತೆಗೆದುಕೊಂಡು ಅರವಿಂದ್ ಕುಮಾರ್ ಗೋಯಲ್ ಜನರಿಗೆ ಉಚಿತ ಸೌಲಭ್ಯಗಳನ್ನು ಒದಗಿಸಿದ್ದರು. ಅವರು ರಾಜ್ಯದಲ್ಲಿ ಬಡವರಿಗೆ ಉಚಿತ ಶಿಕ್ಷಣ ಮತ್ತು ಉತ್ತಮ ಚಿಕಿತ್ಸೆಯನ್ನು ನೀಡಿದ್ದರು.
ಇದನ್ನೂ ಓದಿ:ಸರ್ಕಾರ ನಿಷೇಧಿಸಿದ್ದರೂ ಎಗ್ಗಿಲ್ಲದೆ ಸಾಗಿದೆ ಕ್ಯಾಟ್ ಫಿಶ್ ಸಾಕಣೆ ಹಾಗೂ ಮಾರಾಟ..!
ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮಾಜಿ ರಾಷ್ಟ್ರಪತಿಗಳಾದ ಪ್ರಣಬ್ ಮುಖರ್ಜಿ, ಪ್ರತಿಭಾ ಪಾಟೀಲ್ ಮತ್ತು ಡಾ ಎಪಿಜೆ ಅಬ್ದುಲ್ ಕಲಾಂ ಅವರು ಡಾ.ಗೋಯಲ್ ಅವರನ್ನು ಗೌರವಿಸಿದ್ದಾರೆ.
ಆಸ್ತಿಯ ನೈಜ ಬೆಲೆಯನ್ನು ಲೆಕ್ಕಾಚಾರ ಮಾಡಲು ಐವರು ಸದಸ್ಯರ ಸಮಿತಿಯನ್ನು ಸರ್ಕಾರ ರಚಿಸಿದೆ.