Advertisement

ಆಸ್ಪತ್ರೆಯಲ್ಲಿ ಅಗ್ನಿ ಅವಘಡ : ವೈದ್ಯ ಸೇರಿ ಇಬ್ಬರು ಮಕ್ಕಳು ಸಜೀವ ದಹನ

02:03 PM Sep 25, 2022 | Team Udayavani |

ತಿರುಪತಿ : ರವಿವಾರ ಮುಂಜಾನೆ ಆಸ್ಪತ್ರೆಯ ಹೊಸ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿ ವೈದ್ಯರು ಸೇರಿ ಇಬ್ಬರು ಮಕ್ಕಳು ಸಜೀವ ದಹನಗೊಂಡ ಘಟನೆ ತಿರುಪತಿಯ ರೇಣಿಗುಂಟಾದಲ್ಲಿ ಸಂಭವಿಸಿದೆ.

Advertisement

ತಿರುಪತಿಯ ರೇಣಿಗುಂಟಾದಲ್ಲಿ ಹೊಸದಾಗಿ ನಿರ್ಮಿಸಲಾದ ಕಾರ್ತಿಕೇಯ ಖಾಸಗಿ ಆಸ್ಪತ್ರೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕಟ್ಟಡದ ಮೊದಲ ಮಹಡಿಯಲ್ಲಿ ವೈದ್ಯರು ಮತ್ತು ಅವರ ಕುಟುಂಬ ವಾಸವಿತ್ತು ಎನ್ನಲಾಗಿದೆ. ಬೆಂಕಿ ಅವಘಡ ಸಂಭವಿಸಿದ ಕೂಡಲೇ ವೈದ್ಯರು ತನ್ನ ಮಕ್ಕಳನ್ನು ರಕ್ಷಣೆ ಮಾಡಲು ಮುಂದಾಗಿದ್ದಾರೆ ಈ ವೇಳೆ ಬೆಂಕಿಯ ತೀವ್ರ ಸ್ವರೂಪ ಪಡೆದು ಮೂವರೂ ಕಟ್ಟಡದ ಒಳಗೆ ಸಿಲುಕಿಕೊಂಡು ಸಜೀವ ದಹನವಾಗಿದ್ದಾರೆ.

ಮೃತರನ್ನು ಡಾ.ರವಿಶಂಕರ್ ರೆಡ್ಡಿ (45), ಅವರ ಪುತ್ರ ಭರತ್ (ಸಿದ್ದು) (12) ಮತ್ತು ಪತ್ರಿ ಕಾರ್ತಿಕಾ (6) ಎಂದು ಗುರುತಿಸಲಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ರವಿಶಂಕರ್ ರೆಡ್ಡಿ ಅವರ ತಾಯಿ ಮತ್ತು ಪತ್ನಿಯನ್ನು ರಕ್ಷಿಸಿದ್ದಾರೆ. ಅವರನ್ನು ತಿರುಪತಿಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ : ಫರಂಗಿಪೇಟೆ ಪರಿಸರದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ವದಂತಿ : ಗ್ರಾ.ಪಂ ತಂಡದಿಂದ ಪರಿಶೀಲನೆ

Advertisement
Advertisement

Udayavani is now on Telegram. Click here to join our channel and stay updated with the latest news.

Next