Advertisement
ಘಟನೆ ದೆಹಲಿಯ ಹೆಡ್ಗೆವಾರ್ ಆಸ್ಪತ್ರೆಯಲ್ಲಿ ನಡೆದಿದ್ದು ವೈದ್ಯರ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಯಾದ್ ರಾವ್ ಎನ್ನಲಾಗಿದೆ.
ಯಾದ್ ರಾವ್ ಶನಿವಾರ ತಡರಾತ್ರಿ ಮನೆಯಲ್ಲಿ ಆಯತಪ್ಪಿ ಬಿದ್ದು ತಲೆಗೆ ಗಾಯಮಾಡಿಕೊಂಡಿದ್ದರು, ಅವರನ್ನು ಮಗ ಹಾಗೂ ಮಗಳು ಹೆಡ್ಗೆವಾರ್ ಆಸ್ಪತ್ರೆಗೆ ಕರೆತಂದಿದ್ದಾರೆ, ಗಾಯಗೊಂಡ ವ್ಯಕ್ತಿಯನ್ನು ಪರಿಶೀಲಿಸಿದ ವೈದ್ಯರು ಚಿಕಿತ್ಸೆಗೆ ಮುಂದಾಗಿದ್ದಾರೆ. ತಲೆಗೆ ಗಾಯವಾದ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡುವ ವೇಳೆ ವ್ಯಕ್ತಿಗೆ ನೋವಾಗಿದೆ ಇದರಿಂದ ಸಿಟ್ಟಿಗೆದ್ದ ರೋಗಿ ವೈದ್ಯರನ್ನು ತಳ್ಳಿ ಕಪಾಳಮೋಕ್ಷ ಮಾಡಿದ್ದಾರೆ. ಚಿಕಿತ್ಸೆಗೆ ಒಳಗಾಗಿದ್ದ ವ್ಯಕ್ತಿಯ ಮಗ ಹಾಗೂ ಮಗಳು ವಿಚಾರ ತಿಳಿದು ಒಳಗೆ ಪ್ರವೇಶಿಸಿ ವೈದ್ಯರಿಗೆ ಬೈದು ನಿಂದಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಇದನ್ನು ತಡೆಯಲು ಬಂದ ಆಸ್ಪತ್ರೆಯ ಸಿಬಂದಿಯನ್ನು ತಳ್ಳಿ ಹಲ್ಲೆ ನಡೆಸಿದ್ದಾಗಿ ತಿಳಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ವೈದ್ಯರು ಗಾಯಗೊಂಡು ಆಸ್ಪತ್ರೆಗೆ ಬಂದಿದ್ದ ವ್ಯಕ್ತಿ ಪಾನಮತ್ತನಾಗಿದ್ದು, ಆತ ಸ್ಥಿಮಿತದಲ್ಲಿ ಇರಲಿಲ್ಲ ಹಾಗಾಗಿ ನಮ್ಮ ಮೇಲೆ ಹಲ್ಲೆ ನಡೆಸಿರುವುದಾಗಿ ಹೇಳಿಕೆ ನೀಡಿದ್ದಾರೆ.
Related Articles
Advertisement
ವೈದ್ಯರ ದೂರಿನ ಆಧಾರದ ಮೇಲೆ, ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 121 ಮತ್ತು 223 ಮತ್ತು ಸೆಕ್ಷನ್ 3 ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: Krishna Janmashtami: ಯುವಜನತೆಗೆ ಮಾದರಿಯಾಗಲಿ ಶ್ರೀಕೃಷ್ಣ