ಮಂಗಳೂರು: ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಿರ್ಲಕ್ಷ್ಯ, ತಪ್ಪು ನೀತಿ ಹಾಗೂ ಬದ್ಧತೆಯ ಕೊರತೆಯಿಂದಾಗಿ ರಾಜ್ಯದಲ್ಲಿ ವೈದ್ಯಕೀಯ ಕೋರ್ಸ್ ಗಳ ಪ್ರವೇಶ ಕೌನ್ಸೆಲಿಂಗ್ ಇನ್ನೂ ಆರಂಭಗೊಂಡಿಲ್ಲ.
ಇದರಿಂದಾಗಿ ನೀಟ್ ಬರೆದ ಲಕ್ಷಾಂತರ ವಿದ್ಯಾರ್ಥಿ ಗಳು, ಪೋಷಕರಲ್ಲಿ ಅನಿಶ್ಚಿತತೆ ನೆಲೆಸಿದ್ದು ಸರಕಾರ ಕೂಡಲೇ ಪೂರಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಹಾಗೂ ಮಾಜಿ ಆರೋಗ್ಯ ಸಚಿವ ಯು.ಟಿ. ಖಾದರ್ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
ಹಿಂದೆ ವೀರಪ್ಪ ಮೊಲಿ ಸಿಎಂ ಆಗಿದ್ದ ವೇಳೆ ಆರಂಭಗೊಂಡಿದ್ದ ಸಿಇಟಿಯಲ್ಲಿ ಈ ರೀತಿ ಗೊಂದಲಗಳು ಇರಲಿಲ್ಲ. ಇದೀಗ ನೀಟ್ ಪರೀಕ್ಷೆಯಿಂದಾಗಿ ಸಮಸ್ಯೆ ಸೃಷ್ಟಿಯಾಗಿದೆ.
ಇದನ್ನೂ ಓದಿ:ವಿಮಾನದಿಂದ ಇಳಿಯುವವರು ಕೊರೊನಾ ವರದಿ ತೋರಿಸಬೇಕಿಲ್ಲ
ವಿದ್ಯಾರ್ಥಿ ಗಳ ಹಿತದೃಷ್ಟಿಯಿಂದ ಮುಖ್ಯ ಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು ಕೂಡಲೇ ಕೌನ್ಸೆಲಿಂಗ್ ನಡೆಸಿ ವಿದ್ಯಾರ್ಥಿಗಳ ಹಿತ ಕಾಯ ಬೇಕು ಎಂದರು.