Advertisement

Doctor’s negligence?: ವೃಷಣ ಶಸ್ತ್ರಚಿಕಿತ್ಸೆ ವೇಳೆ ಬಾಲಕ ಸಾ*ವು

01:23 AM Oct 07, 2024 | Team Udayavani |

ರಾಮನಗರ: ವೃಷಣ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕನೋರ್ವ ಶಸ್ತ್ರಚಿಕಿತ್ಸೆ ವೇಳೆ ಸಾವನ್ನಪ್ಪಿರುವ ಘಟನೆ ನಗರದ ಆಸ್ಪತ್ರೆಯಲ್ಲಿ ರವಿವಾರ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಬಾಲಕನ ಕುಟುಂಬದವರು ಆರೋಪಿಸಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Advertisement

ಹುಲಿಯೂರುದುರ್ಗ ಮೂಲದ ಆರ್ಯ (6) ಮೃತ ಬಾಲಕ. ಪೋಷಕರು ರಾಮನಗರದ ಮಾಯ ಗಾನಹಳ್ಳಿಯಲ್ಲಿ ವಾಸ ವಿದ್ದರು. ಮಗುವಿಗೆ ಒಂದೇ ವೃಷಣ ವಿದ್ದು, ಈ ಸಂಬಂಧ ವಿವಿಧ ಆಸ್ಪತ್ರೆಗಳಿಗೆ ತೋರಿಸಿ ಪೋಷಕರು ಚಿಕಿತ್ಸೆ ಕೊಡಿಸಿದ್ದರು. ನಗರದ ಖಾಸಗಿ ಆಸ್ಪತ್ರೆಯಲ್ಲಿ ತೋರಿಸಿದಾಗ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡುವುದಾಗಿ ತಿಳಿಸಿದ್ದರು. ರವಿವಾರ ಬೆಳಗ್ಗೆ 11 ಗಂಟೆಗೆ ಮಗುವನ್ನು ಶಸ್ತ್ರಚಿಕಿತ್ಸಾ ಕೊಠಡಿಗೆ ಕರೆದೊಯ್ದಿದ್ದಾರೆ. 11.30ರ ಸುಮಾರಿಗೆ ಮಗು ಸಾವಿಗೀಡಾಗಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವಿಗೀಡಾಗಿದೆ ಎಂದು ಪಾಲಕರು ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next