Advertisement

ಸುವರ್ಣಸೌಧದ ಬಳಿ ವೈದ್ಯರ ಧರಣಿ ಇಂದು

06:40 AM Nov 13, 2017 | Team Udayavani |

ಬೆಂಗಳೂರು: ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆ ತಿದ್ದುಪಡಿ ವಿಧೇಯಕದಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಸಾವಿರಾರು ವೈದ್ಯರು ಸೋಮವಾರ ಸುವರ್ಣಸೌಧದ ಬಳಿ ಬೃಹತ್‌ ಪ್ರತಿಭಟನೆಗೆ ಸಜ್ಜಾಗಿದ್ದಾರೆ.

Advertisement

ತಿದ್ದುಪಡಿ ವಿಧೇಯಕದಲ್ಲಿನ ಆಕ್ಷೇಪಾರ್ಹ ಅಂಶ ಕೈಬಿಡುವಂತೆ ಒತ್ತಾಯಿಸಿ ಸೋಮವಾರ ಪೂರ್ವ ನಿಗದಿಯಂತೆ ಬೆಳಗಾವಿ ಚಲೋ ನಡೆಸಲಾಗುವುದು. ಸ್ಥಳೀಯ ಪೊಲೀಸರಿಂದ ಅನುಮತಿ ಪಡೆಯಲಾಗಿದ್ದು, ಅವರು ಸೂಚಿಸಿದ ಸ್ಥಳದಲ್ಲೇ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು. ಸರ್ಕಾರ ಸ್ಪಂದಿಸುವವರೆಗೆ ಹೋರಾಟ ಮುಂದುವರಿಸ ಲಾಗುವುದು ಎಂದು ಭಾರತೀಯ ವೈದ್ಯ ಸಂಘದ ಕರ್ನಾಟಕ ಶಾಖೆ ಅಧ್ಯಕ್ಷ ಡಾ.ಎಚ್‌.ಎನ್‌.ರವೀಂದ್ರ ತಿಳಿಸಿದರು. ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ 20,000ಕ್ಕೂ ಹೆಚ್ಚು ವೈದ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಕ್ಲಿನಿಕ್‌ ಹಾಗೂ ಖಾಸಗಿ ನರ್ಸಿಂಗ್‌ ಹೋಮ್‌ಗಳ ಆರೋಗ್ಯ ಸೇವೆಯಲ್ಲಿ ತುಸು ವ್ಯತ್ಯಯವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next