Advertisement

ಇಂದು ದೇಶವ್ಯಾಪಿ ವೈದ್ಯರ ಮುಷ್ಕರ

01:26 AM Jun 17, 2019 | Team Udayavani |

ಹೊಸದಿಲ್ಲಿ/ಬೆಂಗಳೂರು: ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಸ್ಥೆ (ಐಎಂಎ) ಕರೆ ನೀಡಿರುವ ದೇಶವ್ಯಾಪಿ ಮುಷ್ಕರ ರಾಜ್ಯವೂ ಸೇರಿ ಎಲ್ಲ ಕಡೆಗಳಲ್ಲಿ ಸೋಮವಾರ ನಡೆಯುವುದು ಬಹುತೇಕ ಖಚಿತವಾಗಿದೆ.

Advertisement

ಪಶ್ಚಿಮ ಬಂಗಾಲದಲ್ಲಿ ವೈದ್ಯರು ಮತ್ತು ಸರಕಾರದ ನಡುವೆ ಮಾತುಕತೆ ಇನ್ನೂ ಆರಂಭವಾಗದ ಕಾರಣ ಈ ಮೊದಲೇ ಕರೆ ಕೊಟ್ಟಿರುವಂತೆ ಸೋಮವಾರ ಮುಷ್ಕರ ನಡೆಯಲಿದೆ. ಮುಷ್ಕರಕ್ಕೆ ಕರ್ನಾಟಕದಲ್ಲೂ ಬೆಂಬಲ ವ್ಯಕ್ತವಾಗಿದ್ದು, ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ ಘಟಕ(ಒಪಿಡಿ)ದ ಸೇವೆಯಲ್ಲಿ ವ್ಯತ್ಯಯವಾಗಲಿದೆ. ತುರ್ತು ಆರೋಗ್ಯ ಸೇವೆ ಲಭ್ಯವಿರಲಿದೆ. ಸರಕಾರಿ ಆಸ್ಪತ್ರೆಗಳ ಒಪಿಡಿ ಸೇವೆ ಎಂದಿನಂತೆಯೇ ಇರಲಿದೆ.

Advertisement

Udayavani is now on Telegram. Click here to join our channel and stay updated with the latest news.

Next