Advertisement

ಮಾನ್ಯತೆ ನವೀಕರಣಕ್ಕೆ ಪ್ರತಿ ವರ್ಷ ದಾಖಲೆ ಕೇಳಬಾರದು: ಹೊರಟ್ಟಿ

10:51 PM Oct 29, 2023 | Team Udayavani |

ಹುಬ್ಬಳ್ಳಿ: ರಾಜ್ಯದಲ್ಲಿ ಖಾಸಗಿ ಅನುದಾನಿತ, ಅನುದಾನ ರಹಿತ ಶಾಲಾ-ಕಾಲೇಜುಗಳ ಮಾನ್ಯತೆ ನವೀಕರಣಕ್ಕೆ ಪ್ರತಿ ವರ್ಷ ದಾಖಲೆ ಕೇಳುವುದು ಸರಿಯಲ್ಲ. ಈ ಅವೈಜ್ಞಾನಿಕ ಪದ್ಧತಿಯನ್ನು ಸರಿಪಡಿಸಬೇಕೆಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಆಗ್ರಹಿಸಿದ್ದಾರೆ.

Advertisement

ಖಾಸಗಿ ಶಾಲಾ-ಕಾಲೇಜುಗಳ ಮಾನ್ಯತೆ ನವೀಕರಣಕ್ಕೆ ಹಲವಾರು ಷರತ್ತುಗಳನ್ನು ವಿಧಿಸಲಾಗುತ್ತಿದೆ. ಸರಕಾರಿ ಶಾಲೆಗಳಿಗೆ ಇಲ್ಲದ ನಿಯಮಗಳು ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ಮಾತ್ರ ವಿಧಿಸುತ್ತಿರುವುದು ಸರಿಯಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಈ ಹಿಂದೆ ತಾವು ಶಿಕ್ಷಣ ಸಚಿವರಾಗಿದ್ದಾಗ ಪ್ರತಿ 5, 10 ಹಾಗೂ 15 ವರ್ಷಕ್ಕೊಮ್ಮೆ ಮಾನ್ಯತೆ ನವೀಕರಣ, ಅನಂತರ ಶಾಶ್ವತ ಮಾನ್ಯತೆ ನವೀಕರಣ ನೀಡುವ ಕುರಿತಾಗಿ ಆದೇಶಿಸಿದ್ದೆ. ಒಂದೆರಡು ವರ್ಷ ಆ ಆದೇಶ ಪಾಲಿಸಿದ ಶಿಕ್ಷಣ ಇಲಾಖೆ ಅಧಿಕಾರಿಗಳು ಪುನಃ ಪ್ರತಿ ವರ್ಷ ಮಾನ್ಯತೆ ನವೀಕರಣ ಪ್ರಸ್ತಾವನೆ ಸಲ್ಲಿಸಲು ಸೂಚಿಸುತ್ತಿರುವುದು ಯಾವುದಕ್ಕೆ ಎಂಬುದು ಅರ್ಥವಾಗುತ್ತಿಲ್ಲ. 2006-07ನೇ ಸಾಲಿನಲ್ಲಿ ತಾವು ಸಚಿವರಾಗಿದ್ದಾಗ ಜಾರಿಗೊಳಿಸಿದ್ದ ಆದೇಶವನ್ನೇ ಜಾರಿಗೆ ತರಲು ಕ್ರಮ ಕೈಗೊಳ್ಳಬೇಕೆಂದು ಸಭಾಪತಿ ಹೊರಟ್ಟಿ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next