Advertisement

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

03:00 PM Apr 30, 2024 | Team Udayavani |

ಉಡುಪಿ: ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ವಿಶೇಷ ಸಾನಿಧ್ಯವಾದ ಶ್ರೀ ಕುಬೇರ ಚಿತ್ರಲೇಖ ಸಹಿತವಾದ ಮಹಾಲಕ್ಷ್ಮಿಯ ಸನ್ನಿಧಾನದಲ್ಲಿ ಪ್ರತಿಷ್ಠ ವಾರ್ಷಿಕ ಮಹೋತ್ಸವವು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಲಿದೆ..

Advertisement

ಆ ಪ್ರಯುಕ್ತ ಇದೇ ತಿಂಗಳ ತಾರೀಕು ಎರಡರ ಗುರುವಾರದಂದು ಬೆಳಿಗ್ಗೆ ಗಂಟೆ 8 ರಿಂದ ಸಾಮೂಹಿಕ ದೇವತಾ ಪ್ರಾರ್ಥನೆ ಸ್ವಸ್ತಿ ಪುಣ್ಯಹ ವಾಚನ ಆಧ್ಯ ಗಣಪತಿಯಾಗದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದೆ.

ಶ್ರೀ ಕುಬೇರ ಚಿತ್ರಲೇಖ ಸಹಿತ ಮಹಾಲಕ್ಷ್ಮಿಯ ಸನ್ನಿಧಾನದಲ್ಲಿ ಪ್ರಧಾನ ಹೋಮ ಪಂಚವಿ ಶತಿ ಕಲಶ ಅಭಿಷೇಕ ಪ್ರಸನ್ನ ಪೂಜೆ ಶ್ರೀ ಲಕ್ಷ್ಮಿ ಸಹಸ್ರನಾಮ ಪಾಯಸ ಹೋಮ ಶ್ರೀ ಕುಬೇರ ಮಂತ್ರ ಹೋಮ ಬ್ರಾಹ್ಮಣ ಸುವಾಸಿನಿ ಆರಾಧನೆ ಮಹಾಪೂಜೆ ಹಾಗೂ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ಸಂಜೆ ರಂಗ ಪೂಜೆ ನೆರವೇರಲಿದೆ ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next