Advertisement

ಗಣೇಶ್‌ ಬಿಜೆಪಿ ಸೇರ್ಪಡೆ ಗೊತ್ತಿಲ್ಲ: ರೆಡ್ಡಿ

12:43 AM Jan 28, 2019 | Team Udayavani |

ಬಳ್ಳಾರಿ: ಹೋಸಪೇಟೆ ಶಾಸಕ ಆನಂದ್‌ಸಿಂಗ್‌ ಮೇಲೆ ಹಲ್ಲೆ ನಡೆಸಿ ನಾಪತ್ತೆಯಾಗಿರುವ ಕಂಪ್ಲಿ ಶಾಸಕ ಜೆ.ಎನ್‌. ಗಣೇಶ್‌ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳೋದು ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಬಳ್ಳಾರಿ ನಗರ ಶಾಸಕ ಸೋಮಶೇಖರ್‌ ರೆಡ್ಡಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣೇಶ್‌ ಅವರನ್ನು ಕಾಂಗ್ರೆಸ್‌ ಕೈ ಬಿಡುತ್ತೂ ಇಲ್ಲವೋ ಎಂಬುದು ಗೊತ್ತಿಲ್ಲ. ಒಂದು ವೇಳೆ ಕಾಂಗ್ರೆಸ್‌ ಕೈಬಿಟ್ಟರೆ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಬಗ್ಗೆ ಬಿಜೆಪಿ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ. ಆದರೂ, ಅವರು ಬಿಜೆಪಿಗೆ ಬರುವ ವಿಚಾರ ನನಗೆ ಗೊತ್ತಿಲ್ಲ ಎಂದರು. ಈ ವಿಷಯ ವನ್ನು ರಾಜ್ಯದ ಮುಖಂಡರು ಪಕ್ಷದ ಹಿರಿಯ ನಾಯಕರ ಗಮನಕ್ಕೆ ತಂದು ಚರ್ಚಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next