Advertisement

ಡೊಂಬಿವಲಿ ಶ್ರೀ ಶಕ್ತಿ ಕನ್ನಡ ಸಂಘ: ರಾಘವೇಂದ್ರ ಸ್ವಾಮಿಗಳ ಆರಾಧನೆ 

12:24 PM Sep 04, 2018 | |

ಮುಂಬಯಿ: ಡೊಂಬಿವಲಿ ಪಶ್ಚಿಮದ ಶ್ರೀ ಶಕ್ತಿ ಮಹಿಳಾ ಕನ್ನಡ  ಸಂಘದ ವತಿಯಿಂದ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ 347 ನೇ ವಾರ್ಷಿಕ ಆರಾಧನಾ ಮಹೋತ್ಸವವು ಸೆ. 28 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು.

Advertisement

ಡೊಂಬಿವಲಿ ಪಶ್ಚಿಮ ಓಲ್ಡ್‌ ಡೊಂಬಿವಲಿಯ ಕಾಂಚಿ ಕೋ. ಹೌಸಿಂಗ್‌ ಸೊಸೈಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಧಾರ್ಮಿಕ ಕಾರ್ಯಕ್ರಮವಾಗಿ ಪೂರ್ವಾಹ್ನ 10.30 ರಿಂದ ಆರಾಧನೆ, ಆರತಿ, ಮಧ್ಯಾಹ್ನ 12 ರಿಂದ ಮಹಾಮಂಗಳಾರತಿ, ಪ್ರಸಾದ ವಿತರಣೆ, ಮಧ್ಯಾಹ್ನ 12.30 ರಿಂದ ಮಹಾಪ್ರಸಾದ ರೂಪದಲ್ಲಿ ಅನ್ನಪ್ರಸಾದ ನಡೆಯಿತು.

ಅಪರಾಹ್ನ 4 ರಿಂದ ಶ್ರೀ ಶಕ್ತಿ ಮಹಿಳಾ ಕನ್ನಡ ಸಂಘದವರಿಂದ ಭಜನ ಕಾರ್ಯಕ್ರಮ ನೆರವೇರಿತು. ವಿಠuಲ್‌ ಎಂ. ನಾಯ್ಕ ಅವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಶಕ್ತಿ 

ಮಹಿಳಾ ಕನ್ನಡ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯೆಯರು ಪಾಲ್ಗೊಂಡು ಸಹಕರಿಸಿದರು.

ಸ್ಥಳೀಯ ವಿವಿಧ ಕ್ಷೇತ್ರಗಳ ಗಣ್ಯರು, ಸಮಾಜ ಸೇವಕರು, ದಾನಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ತುಳು-ಕನ್ನಡಿಗರು, ಅನ್ಯಭಾಷಿಗರು, ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿ ಗುರುಗಳ ಕೃಪೆಗೆ ಪಾತ್ರರಾದರು.
 

Advertisement
Advertisement

Udayavani is now on Telegram. Click here to join our channel and stay updated with the latest news.

Next