Advertisement

Mangaluru ಕೌಟುಂಬಿಕ ದೌರ್ಜನ್ಯ: ನಿರಂತರ ನಿಗಾ ವಹಿಸಿ

01:00 AM Jan 17, 2024 | Team Udayavani |

ಮಂಗಳೂರು: ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸಂತ್ರಸ್ತ ಮಹಿಳೆಯರಿಗೆ ಸೂಕ್ತ ನ್ಯಾಯ ದೊರಕಿಸಲು ಕ್ರಮ ವಹಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ
ನಿರ್ವಹಣಾಧಿಕಾರಿ ಡಾ| ಆನಂದ್‌ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಮಂಗಳವಾರ ನೇತ್ರಾವತಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ 170 ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಸಾಂತ್ವನ ಕೇಂದ್ರಗಳಲ್ಲಿ ಪ್ರಕರಣಗಳ ವಿಚಾರಣೆ ನಡೆಸಿ, ಸಂತ್ರಸ್ತರಿಗೆ ಸೂಕ್ತ ನ್ಯಾಯ ದೊರಕಿಸಬೇಕು.

ನ್ಯಾಯಾಲಯಗಳಲ್ಲಿ ದಾಖಲಿಸಲಾದ ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಸೂಕ್ತ ಕಾನೂನು ನೆರವು ನೀಡಲು ಇಲಾಖೆ ಒತ್ತು ನೀಡಬೇಕು. ಪ್ರಕರಣದ ವಿಚಾರಣಾ ಹಂತದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು ಎಂದು ನಿರ್ದೇಶಿಸಿದರು.

ಸ್ತ್ರೀಶಕ್ತಿ ಗುಂಪುಗಳು ತಯಾರಿಸಿದ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಒದಗಿಸಲು ಅವುಗಳಿಗೆ ಆಹಾರ ಸುರಕ್ಷತೆ ಪ್ರಮಾಣಪತ್ರ ನೀಡಿ, ಉತ್ತಮ ಪ್ಯಾಕಿಂಗ್‌ ಮತ್ತು ಬ್ರ್ಯಾಂಡಿಂಗ್ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಸಾಲ ನೀಡುವುದಕ್ಕಿಂತಲೂ ಉತ್ಪಾದನಾ ಚಟುವಟಿಕೆಗಳಿಗೆ ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ತೊಡಗಿಸಿಕೊಳ್ಳಲು ಆದ್ಯತೆ ನೀಡಲು ತಿಳಿಸಿದರು.

ಡಿಎಚ್‌ಒ ಡಾ| ತಿಮ್ಮಯ್ಯ, ಅಪರ ಪೊಲೀಸ್‌ ವರಿಷ್ಠಾಧಿಕಾರಿ ಧರ್ಮಪ್ಪ, ಇಲಾಖೆಗಳ ಅಧಿಕಾರಿಗಳು, ಡಾ| ಹಿಲ್ಡಾ ರಾಯಪ್ಪನ್‌, ಸಾಂತ್ವನ ಕೇಂದ್ರಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Advertisement

ಚಾರ್ಜ್‌ಶೀಟ್‌ ಸಲ್ಲಿಸಲು ಸೂಚನೆ
ಜಿಲ್ಲೆಯಲ್ಲಿ ವರದಕ್ಷಿಣೆ ನಿಷೇಧ ಕಾಯಿದೆಯಡಿ 36 ಪ್ರಕರಣ ದಾಖಲಾಗಿದ್ದು, ಈ ಪೈಕಿ 30 ಪ್ರಕರಣ ತನಿಖಾ ಹಂತದಲ್ಲಿದೆ. ದಾಖಲಾದ ಪ್ರಕರಣಗಳಲ್ಲಿ ತ್ವರಿತ ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸುವಂತೆ ಪೊಲೀಸ್‌ ಅಧಿಕಾರಿಗಳಿಗೆ ದ.ಕ. ಜಿ.ಪಂ. ಸಿಇಒ ಡಾ| ಆನಂದ್‌ ಅವರು ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next