Advertisement

ಮಣಿಪಾಲ : ಕುಸಿಯುವ ಭೀತಿಯಲ್ಲಿದೆ ಎಂಟು ಅಂತಸ್ತಿನ ಕಟ್ಟಡ! ಸ್ಥಳಕ್ಕೆ ಅಧಿಕಾರಿಗಳ ದೌಡು

06:14 PM Sep 21, 2020 | sudhir |

ಮಣಿಪಾಲ : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿ ಇರುವ ಎಂಟು ಅಂತಸ್ತಿನ ಕಟ್ಟಡದ ತಡೆಗೋಡೆ ಕುಸಿಯುತ್ತಿದ್ದು ಕಟ್ಟಡ ಕುಸಿಯುವ ಹಂತದಲ್ಲಿದೆ.

Advertisement

ಸ್ಥಳಕ್ಕೆ ಅಧಿಕಾರಿಗಳು ಧಾವಿಸಿದ್ದು ಕಟ್ಟದಲ್ಲಿರುವ ಜನರನ್ನು ಸ್ಥಳಾಂತರಿಸುವ ಕೆಲಸ ನೆಡೆಯುತ್ತಿದೆ ಸದ್ಯ ಕಟ್ಟಡದ ತಳಭಾಗದಲ್ಲಿ ಮೂರು ಅಂಗಡಿಗಳಿದ್ದು ಅವುಗಳನ್ನು ಮುಚ್ಚಲಾಗಿದೆ.

ವಾಹನ ಸಂಚಾರ ಬದಲಾವಣೆ : ಕಟ್ಟಡ ತಡೆಗೋಡೆ ಕುಸಿದ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಉಡುಪಿಯಿಂದ ಮಣಿಪಾಲಕ್ಕೆ ಬರುವ ವಾಹನ ಸಂಚಾರದ ರಸ್ತೆಯನ್ನು ಬಂದ್ ಮಾಡಲಾಗಿದ್ದು ಇನ್ನೊಂದು ಬದಿಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಎಸಿ, ಪೌರಾಯುಕ್ತ, ತಹಶಿಲ್ದಾರ್, ಜಿ.ಪಂ ಅಧ್ಯಕ್ಷರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next