Advertisement

ಸಿಎಂ ಪರಿಹಾರ ನಿಧಿಗೆ ದೇಣಿಗೆ

01:21 AM May 10, 2019 | Team Udayavani |

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ವತಿಯಿಂದ ಮುಖ್ಯಮಂತ್ರಿಯವರ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 9.17 ಕೋಟಿ ರೂ. ದೇಣಿಗೆ ನೀಡಲಾಯಿತು.

Advertisement

ಕೆಎಸ್‌ಆರ್‌ಟಿಸಿಯ ಹಿರಿಯ ಅಧಿಕಾರಿಕೆಎಸ್‌ಆರ್‌ಟಿಸಿಗಳು ಗುರುವಾರ ವಿಧಾನಸೌಧದ ಮುಖ್ಯಮಂತ್ರಿಯರ ಕೊಠಡಿಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಡಿಕೇರಿ ಪ್ರವಾಹ ಸಂತ್ರಸ್ತರಿಗಾಗಿ ಸಂಸ್ಥೆಯಿಂದ ಸಂಗ್ರಹಿಸಲಾಗಿದ್ದ 9.17 ಕೋಟಿ ಮೊತ್ತದ ಚೆಕ್‌ ಹಸ್ತಾಂತರಿಸಿದರು. ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ಅಧಿಕಾರಿ ಮತ್ತು ಸಿಬ್ಬಂದಿಯ ಒಂದು ದಿನದ ವೇತನವನ್ನು ಮಡಿಕೇರಿ ಪ್ರವಾಹ ಸಂತ್ರಸ್ತರ ನೆರವಿಗೆ ಸಂಗ್ರಹಿಸಲಾಗಿತ್ತು. ಇದೇ ವೇಳೆ ಕೆಎಸ್‌ಆರ್‌ಟಿಸಿ ಕ್ರೆಡಿಟ್ ಕೋ-ಅಪರೇಟಿವ್‌ ಸೊಸೈಟಿಯಿಂದ 17.81 ಲಕ್ಷ ರೂ. ಚೆಕ್‌ ಸಿಎಂ ಪರಿಹಾರ ನಿಧಿಗೆ ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ, ಶಾಸಕರಾದ ಶಿವಲಿಂಗೇಗೌಡ, ಸತ್ಯನಾರಾಯಣ, ಹಿರಿಯ ಅಧಿಕಾರಿಗಳಾದ ಬಸವರಾಜು, ಶಿವಯೋಗಿ ಕಳಸದ, ಎನ್‌. ವಿ. ಪ್ರಸಾದ್‌ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next