Advertisement

ಡೋಣಿ ನದಿ ಪ್ರವಾಹ: ಮುನ್ನೆಚ್ಚರಿಕೆ ಕ್ರಮಕ್ಕೆ ಎಂ.ಬಿ.ಪಾಟೀಲ ಸೂಚನೆ

02:41 PM Oct 12, 2020 | keerthan |

ವಿಜಯಪುರ: ತಮ್ಮ ಕ್ಷೇತ್ರದಲ್ಲಿ ಡೋಣಿ ನದಿ ಪ್ರವಾಸ ಸೃಷ್ಟಿಸಿದ್ದು, ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಬಬಲೇಶ್ವರ ಶಾಸಕರಾದ ಮಾಜಿ ಸಚಿವ ಎಂ.ಬಿ.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement

ದೂರವಾಣಿ ಮೂಲಕ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ ಜೊತೆ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಡೋಣಿ ನದಿ ಪ್ರವಾಹ ಸೃಷ್ಟಿಸಿದೆ. ಇದರಿಂದ ದಾಶ್ಯಾಳ, ತೊನಶ್ಯಾಳ, ಕೋಟ್ಯಾಳ, ಸಾರವಾಡ ಭಾಗದಲ್ಲಿ ಅಪಯದ ಮಟ್ಟ ಮೀರಿ ಹರಿಯುತ್ತಿದೆ. ಹೀಗಾಗಿ ಕೂಡಲೇ ಅಗತ್ಯ ಇರುವ ಸುರಕ್ಷತೆ ಹಾಗೂ ಜನರಿಗೆ ಸೂಕ್ತ ಸೌಲಭ್ಯ ಕಲ್ಪಿಸಬೇಕು ಎಂದು ಕೋರಿದರು.

ಈಗಾಗಲೇ ಬಬಲೇಶ್ವರ, ತಿಕೋಟಾ ತಾಲೂಕಗಳ ತಹಸೀಲ್ದಾರರ ಜೊತೆ ಮಾತನಾಡಿದ್ದು, ಕೂಡಲೇ ಡೋಣಿ ನದಿ ತೀರದ ಹಳ್ಳಿಗರ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡುವಂತೆ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next