Advertisement

Yediyurappa ತಟ್ಟೆಯಲ್ಲಿ ಹೆಗ್ಗಣವಲ್ಲ ಕತ್ತೆ ಸತ್ತು ಬಿದ್ದಿದೆ: ಸಿಎಂ ಸಿದ್ದರಾಮಯ್ಯ

07:00 PM Aug 05, 2024 | Team Udayavani |

ಗೋಕಾಕ್ (ಬೆಳಗಾವಿ): ‘ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಪೋಕ್ಸೊ ಕಾಯ್ದೆಯಡಿ ಕೇಸು ದಾಖಲಾಗಿದೆ. ಯಡಿಯೂರಪ್ಪ ತಟ್ಟೆಯಲ್ಲಿ ಹೆಗ್ಗಣವಲ್ಲ ಕತ್ತೆ ಸತ್ತು ಬಿದ್ದಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಕಿದರು.

Advertisement

ಗೋಕಾಕ್ ನಗರದಲ್ಲಿ ಸೋಮವಾರ(ಆಗಸ್ಟ್5 ) ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ‘ಯಡಿಯೂರಪ್ಪ ಅವರೇ ಪೋಕ್ಸೊ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಪಾದಯಾತ್ರೆ ಮುಗಿಯುವುದರೊಳಗೆ ನಾನು ರಾಜೀನಾಮೆ ನೀಡುವಂತೆ ಯಡಿಯೂರಪ್ಪ ಕೇಳಿದ್ದಾರೆ. ಅವರಿಗೆ ನನ್ನ ರಾಜೀನಾಮೆ ಕೇಳುವ ನೈತಿಕತೆ ಇದೆಯೇ?’ ಎಂದು ಪ್ರಶ್ನಿಸಿದರು.

ಯಡಿಯೂರಪ್ಪ ವಿರುದ್ಧ ಈಗಾಗಲೇ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿದೆ. ಸದ್ಯ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರಿಂದ ಹೊರಗೆ ಇದ್ದಾರೆ. ಇಲ್ಲದಿದ್ದರೆ ಜೈಲಿನಲ್ಲಿ ಇರಬೇಕಾಗಿತ್ತು. ಅವರ ಮೇಲೆ ಎಷ್ಟು ಕೇಸ್ ಇವೆ, ಯಾವ ಯಾವ ಕೇಸ್ ಇವೆ ಎಂದು ಅವರಿಗೆ ಗೊತ್ತಿದೆಯೇ? ಈಗ ನನ್ನ ರಾಜೀನಾಮೆ ಕೇಳಲು ನೈತಿಕತೆ ಇದೆಯೇ? ಯಡಿಯೂರಪ್ಪ ಸೇರಿದಂತೆ ಬಿಜೆಪಿಯವರು 21 ಪ್ರಕರಣ ಎದುರಿಸುತ್ತಿದ್ದಾರೆ. ಈಗಾಗಲೇ ಕೆಲವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಉಳಿದ ಎಲ್ಲ ಪ್ರಕರಣಗಳನ್ನೂ ತನಿಖೆಗೆ ನೀಡಲಾಗುವುದು’ ಎಂದರು.

ಸರ್ಕಾರದ ಬಳಿ ದುಡ್ಡಿಲ್ಲ ಎಂಬ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ”ದುಡ್ಡು ಇಲ್ಲದಿದ್ದರೆ ಇಷ್ಟೆಲ್ಲ ಯೋಜನೆ ಹೇಗೆ ಕೊಟ್ಟಿದ್ದೇವೆ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಅಧಿಕಾರ ಇದ್ದಾಗ ಏನೂ ಮಾಡಲಿಲ್ಲ. ಈಗ ಸುಳ್ಳನ್ನು ಸತ್ಯ ಮಾಡುವುದರಲ್ಲಿ ಪಳಗಿ ಬಿಟ್ಟಿದ್ದಾರೆ. ಸುಳ್ಳನ್ನೇ ಸತ್ಯ ಮಾಡುವುದು ಆರೆಸ್ಸೆಸ್‌ನವರಿಂದ ತರಬೇತಿ ನೀಡಲಾಗಿದೆ” ಎಂದು ವಾಗ್ದಾಳಿ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next