Advertisement

ಸಾಲಮನ್ನಾ ಹಣ ಜಮೆಗೆ ನೀತಿ ಸಂಹಿತೆ ಅನ್ವಯ ಮಾಡದಿರಲು ಸಿಎಂ ಪತ್ರ

06:47 AM Mar 28, 2019 | Vishnu Das |

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ರೈತರ ಸಾಲಮನ್ನಾ ಹಣ ಜಮೆಗೆ ತಡೆ ಒಡ್ಡದಂತೆ ಮುಖ್ಯ ಕಾರ್ಯದರ್ಶಿಗಳು ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಕೇಂದ್ರದ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯ ಕಂತು ರೈತರ ಖಾತೆಗೆ ಜಮೆ ಮಾಡಲು ನೀತಿ ಸಂಹಿತೆ ಅಡ್ಡಿಯಾಗಿಲ್ಲ. ಹೀಗಾಗಿ, ರಾಜ್ಯದಲ್ಲಿ ರೈತರ ಸಾಲ ಮನ್ನಾ ಹಣ ಜಮೆಗೂ ನೀತಿ ಸಂಹಿತೆ ಅನ್ವಯವಾಗದಂತೆ ಪತ್ರದಲ್ಲಿ ಕೋರಲಾಗಿದೆ ಎಂದು ಹೇಳಿದ್ದಾರೆ. ಈ ಕುರಿತು ಕೇಂದ್ರ ಚುನಾವಣಾ ಆಯೋಗದಿಂದ ಪೂರಕ ಸ್ಪಂದನೆ ದೊರೆಯಲಿದೆ ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿಯವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿ ಸಾಲಮನ್ನಾ ಬಾಬಿ¤ನ ಹಣ ಬಿಡುಗಡೆ ಹಾಗೂ ಜಮೆಗೆ ನೀತಿ ಸಂಹಿತೆ ಕಾರಣ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಪತ್ರ ರವಾನಿಸಿದ್ದಾರೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next