Advertisement

ಭೀತಿಗೊಳಗಾಗುವುದು ಬೇಡ: ಡಿವಿಎಸ್‌ ಮನವಿ

02:02 AM Aug 09, 2019 | Team Udayavani |

ಬೆಂಗಳೂರು: ‘ರಾಜ್ಯದ ಬಹಳಷ್ಟು ಭಾಗಗಳಲ್ಲಿ ಅತಿವೃಷ್ಟಿಯಿಂದ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದ್ದು, ರಾಜ್ಯ ಆಡಳಿತವು ಚುರುಕಾಗಿ ತನ್ನ ಜವಾಬ್ದಾರಿ ನಿರ್ವಹಿಸುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅತ್ಯಂತ ಮುತುವರ್ಜಿ ವಹಿಸಿ ಉತ್ತರ ಕರ್ನಾಟಕದಲ್ಲಿ ತಾವೇ ಮುಂದೆ ನಿಂತು ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

Advertisement

‘ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿಗಳೊಂದಿಗೆ ಗುರುವಾರ ನಾನು ದೂರವಾಣಿ ಮೂಲಕ ಮಾತನಾಡಿದ್ದು, ಪರಿಸ್ಥಿತಿಯ ವಿವರ ಪಡೆದಿದ್ದೇನೆ. ಈವರೆಗೆ ಯಾವುದೇ ಜೀವ ಹಾನಿ ಆಗಿಲ್ಲ. ಅಗತ್ಯವಿರುವ ಕಡೆ ನಿರಾಶ್ರಿತರ ಕೇಂದ್ರ, ಪರಿಹಾರ ಕೈಗೊಳ್ಳಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next