Advertisement

17ಕ್ಕೆ ದೆಹಲಿಗೆ ಬರಬೇಡಿ: ಡಿ.ಕೆ. ಸುರೇಶ್‌ ಮನವಿ

11:18 PM Sep 15, 2019 | Lakshmi GovindaRaju |

ಬೆಂಗಳೂರು: ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ (ಸೆ. 17) ಡಿ.ಕೆ.ಶಿವಕುಮಾರ್‌ ಅವರ ಪ್ರಕರಣದ ವಿಚಾರಣೆ ನಡೆಯುವ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ದೆಹಲಿಗೆ ಆಗಮಿಸುವುದು ಬೇಡ ಎಂದು ಡಿ.ಕೆ.ಶಿವಕುಮಾರ್‌ ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್‌ ಮನವಿ ಮಾಡಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಹೆಚ್ಚು ಜನರು ನ್ಯಾಯಾಲಯದ ಆವರಣದಲ್ಲಿ ಜಮಾಯಿಸುವುದರಿಂದ ನ್ಯಾಯಾಂಗ ಪ್ರಕ್ರಿಯೆ ಹಾಗೂ ಆಡಳಿತಾತ್ಮಕ ವ್ಯವಸ್ಥೆಗೆ ಸಮಸ್ಯೆ ಎದುರಾಗುತ್ತದೆ.

Advertisement

ಈ ಕಾರಣದಿಂದಾಗಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತಮ್ಮ ಊರುಗಳಲ್ಲೇ ಇರಬೇರೆಂದು ಡಿ.ಕೆ.ಶಿವಕುಮಾರ್‌ ಪರವಾಗಿ ವಿನಂತಿ ಮಾಡಿಕೊಳ್ಳುತ್ತೇನೆಂದು ಸುರೇಶ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕಾನೂನಿಗೆ ಗೌರವ ನೀಡಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ. ಹೀಗಾಗಿ ಆಡಳಿತಾತ್ಮಕ ಹಾಗೂ ನ್ಯಾಯಾಂಗ ಪ್ರಕ್ರಿಯೆ ಸುಗಮವಾಗಿ ಸಾಗಲು ನಾವು ಈ ಮನವಿ ಮಾಡುತ್ತಿದ್ದೇವೆ. ನಿಮ್ಮೆಲ್ಲರ ಸಹಕಾರ ಹಾಗೂ ಬೆಂಬಲ ಸಿಗಲಿದೆ ಎಂಬ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next