Advertisement

ಬಿಜೆಪಿ ಅಭ್ಯರ್ಥಿಆಯ್ಕೆ: ಗೊಂದಲ ಸೃಷ್ಟಿಸುವವರ ವಿರುದ್ಧ ಶಿಸ್ತು ಕ್ರಮ

09:15 AM Apr 14, 2018 | Karthik A |

ಮಂಗಳೂರು: ಬಿಜೆಪಿಯಲ್ಲಿ ಎಲ್ಲ ಅಭ್ಯರ್ಥಿಗಳನ್ನು ರಾಷ್ಟ್ರೀಯ ಅಧ್ಯಕ್ಷರೇ ನೇಮಕ ಮಾಡುತ್ತಿದ್ದು, ಆದರೆ ಈ ಕುರಿತು ಕೆಲವರು ಮಾಧ್ಯಮ, ಸಾಮಾಜಿಕ ಜಾಲತಾಣಗಳ ಮೂಲಕ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಅಂತಹವರ ವಿರುದ್ಧ ಪಕ್ಷ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದು ದ.ಕ. ಬಿಜೆಪಿ ಚುನಾವಣಾ ಉಸ್ತುವಾರಿ ಮೋನಪ್ಪ ಭಂಡಾರಿ ಎಚ್ಚರಿಸಿದರು.

Advertisement

ಶುಕ್ರವಾರ ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಟಿಕೆಟ್‌ ಆಕಾಂಕ್ಷಿಗಳು ಎಲ್ಲ ಪಕ್ಷಗಳಲ್ಲೂ ಇರುತ್ತಾರೆ. ಅದನ್ನು ಗೊಂದಲ ಎಂದು ಹೇಳುವ ಹಾಗಿಲ್ಲ. ಜಿಲ್ಲೆಯ ಬಿಜೆಪಿಯಲ್ಲಿ ಗೆಲ್ಲುವ ಅಭ್ಯರ್ಥಿಗಳನ್ನೇ ಪಕ್ಷ ಆಯ್ಕೆ ಮಾಡುತ್ತದೆ. ಎ. 14 ಅಥವಾ 15ರಂದು ಅಭ್ಯರ್ಥಿಗಳು ಯಾರು ಎಂಬುದನ್ನು ಅಮಿತ್‌ ಶಾ ಅವರು ಘೋಷಣೆ ಮಾಡುತ್ತಾರೆ. ಆದರೆ ಕಾಂಗ್ರೆಸ್‌ ಪಕ್ಷದಲ್ಲಿ ಟಿಕೆಟ್‌ ಹಂಚಿಕೆಯ ಕುರಿತು ಸಾಕಷ್ಟು ಗೊಂದಲಗಳಿದ್ದು, ಹೀಗಾಗಿಯೇ ಅಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆದಿಲ್ಲ. ಆದರೆ ಬಿಜೆಪಿ ಪಕ್ಷ ಎಲ್ಲರಿಗಿಂತ ಮೊದಲು 72 ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ ಎಂದರು.

ಬಿಜೆಪಿಯು ಎ. 14ರಂದು ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ ಜನ್ಮದಿನವನ್ನು ‘ಸುಶಾಸನ ದಿನ’ವನ್ನಾಗಿ ಆಚರಿಸುತ್ತದೆ. ಬಿಜೆಪಿಯ ಮಹಿಳಾ ಮೋರ್ಚಾ ವತಿಯಿಂದ ಎ. 6ರಂದು ಮನೆ ಮನೆ ಭೇಟಿ ಕಾರ್ಯ ಆರಂಭಗೊಂಡಿದ್ದು, ಎ. 14ರಂದು ಅದು ಮುಕ್ತಾಯಗೊಳ್ಳುತ್ತದೆ ಎಂದರು. ಶ್ರೀಕರ ಪ್ರಭು ಅವರ ಸ್ಪರ್ಧೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಮೋನಪ್ಪ ಭಂಡಾರಿ ಅವರು, ಶ್ರೀಕರ ಪ್ರಭು ಅವರಿಗೆ ಸಾಂವಿಧಾನಿಕವಾಗಿ ಸ್ಪರ್ಧಿಸುವ ಅರ್ಹತೆ ಇದೆ, ಹಾಗಾಗಿ ಸ್ಪರ್ಧಿಸುತ್ತಿದ್ದಾರೆ ಎಂದು ತಿಳಿಸಿದರು.  ಬಿಜೆಪಿ ಪ್ರಮುಖರಾದ ಕಿಶೋರ್‌ಕುಮಾರ್‌ ರೈ, ರವಿಶಂಕರ್‌ ಮಿಜಾರ್‌, ನಿತಿನ್‌ಕುಮಾರ್‌, ಸತೀಶ್‌ ಪ್ರಭು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next