Advertisement

ಮತಾಂತರ ನಿಷೇಧ ಕಾಯ್ದೆ & ಗೋಹತ್ಯಾ ನಿಷೇಧ ಕಾಯ್ದೆ ಹಿಂಪಡೆಯುವ ದುಸ್ಸಾಹಸ ಬೇಡ: ಪೇಜಾವರ ಶ್ರೀ

05:49 PM Jun 19, 2023 | Team Udayavani |

ಉಡುಪಿ: ರಾಜ್ಯ ಸರ್ಕಾರವು ಮತಾಂತರ ನಿಷೇಧ ಕಾಯ್ದೆ ಮತ್ತು ಗೋಹತ್ಯಾ ನಿಷೇಧ ಕಾಯ್ದೆ ಹಿಂಪಡೆಯುವ ದುಸ್ಸಾಹಸ ಮಾಡಬಾರದು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಹೇಳಿದ್ದಾರೆ.

Advertisement

ಈ ಬಗ್ಗೆ ವಿಡಿಯೋ ಸಂದೇಶದಲ್ಲಿ ಹೇಳಿರುವ ಅವರು, ಹಿಂದಿನ ಸರ್ಕಾರವು ಸಮಾಜದಲ್ಲಿ ಏರ್ಪಟ್ಟಿದ್ದ ಗೊಂದಲ ಪರಿಹಾರಕ್ಕಾಗಿ ಮತಾಂತರ ನಿಷೇಧ ಕಾಯ್ದೆ ಮತ್ತು ಗೋ ಹತ್ಯಾ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ಪ್ರಸ್ತುತ ಸರ್ಕಾರವು ಈ ಎರಡೂ ಕಾಯ್ದೆಯನ್ನು ಹಿಂಪಡೆಯುವ ನಿರ್ಧಾರ ಅತ್ಯಂತ ಕಳವಳಕಾರಿ ವಿಚಾರ ಎಂದರು.

ಇದನ್ನೂ ಓದಿ:ನಾನು ಆ ರೀತಿ ಮಾಡಬಾರದಿತ್ತು..: ಹೆಲ್ಮೆಟ್ ಸಂಭ್ರಮಾಚರಣೆಯ ಬಗ್ಗೆ ಆವೇಶ್ ಖಾನ್ ಮಾತು

ಸರ್ಕಾರವು ಕಾನೂನು ಹಿಂಪಡೆಯುವ ದುಸ್ಸಾಹಸ ಮಾಡಬಾರದು. ಆ ವಿಷಯದಲ್ಲಿ ಸರ್ಕಾರವು ಜನಪ್ರತಿನಿಧಿಗಳ ಮೂಲಕ ಜನಾಭಿಪ್ರಾಯವನ್ನು ಪಡೆದು ಮುಂದಿನ ಹೆಜ್ಜೆ ಇಡಬೇಕು ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next