Advertisement

ಕರ್ನಾಟಕ ಗೆಲುವಿನಿಂದ ಬೀಗಬೇಡಿ: ಪ್ರಶಾಂತ್‌ ಕಿಶೋರ್‌ ಎಚ್ಚರಿಕೆ

08:30 PM May 17, 2023 | Team Udayavani |

ಪಾಟ್ನಾ: ಖ್ಯಾತ ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌, ಕರ್ನಾಟಕ ವಿಧಾನಸಭಾ ಗೆಲುವಿನಿಂದ ಬೀಗುತ್ತಿರುವ ಕಾಂಗ್ರೆಸ್‌ಗೆ ಭಾರೀ ಎಚ್ಚರಿಕೆ ನೀಡಿದ್ದಾರೆ. ಈ ಗೆಲುವು ಮುಂದಿನ ಲೋಕಸಭಾ ಚುನಾವಣೆಯಲ್ಲಿ ದಿಗ್ವಿಜಯದ ಮುನ್ಸೂಚನೆ ಎಂದುಕೊಳ್ಳಬೇಡಿ. 2013ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆದ್ದಿತ್ತು, ಆದರೆ 2014ರ ಲೋಕಸಭಾ ಚುನಾವಣೆಯಲ್ಲಿ ಪೂರ್ಣವಾಗಿ ಮುಗ್ಗರಿಸಿತ್ತು. 2019ರ ಲೋಕಸಭಾ ಚುನಾವಣೆಗೂ ಮುನ್ನ ಮೂರು ಮುಖ್ಯ ರಾಜ್ಯಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತುಹೋಗಿತ್ತು. ಹೀಗಾಗಿ ಫ‌ಲಿತಾಂಶವನ್ನು ದಿಗ್ವಿಜಯದ ಮುನ್ಸೂಚನೆ ಎಂಬಂತೆ ಪರಿಗಣಿಸಬಾರದು ಎಂದು ತಿಳಿಸಿದ್ದಾರೆ. ಇದೇ ವೇಳೆ ಕರ್ನಾಟಕದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಕ್ಕೆ ಕಾಂಗ್ರೆಸ್‌ಗೆ ಅಭಿನಂದನೆ ಸಲ್ಲಿಸಿದ್ದಾರೆ. ಕೆಲವು ದಿನಗಳ ಹಿಂದೆ ಬಿಹಾರದಲ್ಲಿ ಪಾದಯಾತ್ರೆ ನಡೆಸುತ್ತಿದ್ದ ಅವರು, ಕಾಲಿನ ಮಾಂಸಖಂಡದಲ್ಲಿ ಹರಿತವುಂಟಾಗಿದ್ದರಿಂದ ಅದನ್ನು ನಿಲ್ಲಿಸಿದ್ದಾರೆ. ಈಗವರು ರಹಸ್ಯ ತಾಣವೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

2012ರಲ್ಲಿ ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ ಭರ್ಜರಿ ಜಯ ಗಳಿಸಿತ್ತು. 2014ರಲ್ಲಿ ಲೋಕಸಭೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಉ.ಪ್ರ.ದಲ್ಲಿರುವ 80 ಸ್ಥಾನಗಳ ಪೈಕಿ 73 ಸ್ಥಾನಗಳನ್ನು ಬಿಜೆಪಿಯೇ ಗೆದ್ದುಕೊಂಡಿತ್ತು! 2018ರಲ್ಲಿ ಮಧ್ಯಪ್ರದೇಶ, ಛತ್ತೀಸಗಢ, ರಾಜಸ್ಥಾನಗಳಲ್ಲಿ ಕಾಂಗ್ರೆಸ್‌ ಗೆದ್ದಿದ್ದರೂ, ನಂತರದ ಲೋಕಸಭಾ ಚುನಾವಣೆಯಲ್ಲಿ ದಯನೀಯ ಸೋಲನುಭವಿಸಿತ್ತು ಎಂಬ ಸಂಗತಿಗಳನ್ನು ಐಪ್ಯಾಕ್‌ ಸ್ಥಾಪಕ ಪ್ರಶಾಂತ್‌ ಕಿಶೋರ್‌ ನೆನಪಿಸಿಕೊಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next