Advertisement

ಅನಗತ್ಯವಾಗಿ ಮನೆಯಿಂದ ಹೊರಬರದಿರಿ: ರೇಣುಕಾಚಾರ್ಯ

08:34 AM May 12, 2020 | mahesh |

ಹೊನ್ನಾಳಿ: ತಾಲೂಕಿನಲ್ಲಿ ಮೂವರನ್ನು ಕ್ವಾರಂಟೈನ್‌ನಲ್ಲಿ ಇಡಲಾಗಿದ್ದು, ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕುಗಳ ಜನರು ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿಗಳ
ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

Advertisement

ಸೋಮವಾರ ಪಟ್ಟಣ ಸಮೀಪದ ದೇವನಾಯ್ಕನಹಳ್ಳಿ ಬಡಾವಣೆಯ ಅಲೆಮಾರಿ ಸಮುದಾಯದ ಕುಟುಂಬಗಳಿಗೆ ಹಾಗೂ ಸಾರ್ವಜನಿಕರಿಗೆ ಊಟ ಬಡಿಸಿ ಅವರು ಮಾತನಾಡಿದರು. ದಾವಣಗೆರೆಯಲ್ಲಿ ದಿನೇ ದಿನೇ ಕೋವಿಡ್ ಪಾಸಿಟಿವ್‌ ಪ್ರಕರಣಗಳು ಹೆಚ್ಚುತ್ತಿದ್ದು, ಇಂದು ಕೂಡ ಮೂರು ಪಾಸಿಟಿವ್‌ ಪ್ರಕರಣ ಪತ್ತೆಯಾಗಿವೆ. ಆಲ್ಲಿ 71 ಪ್ರಕರಣದಲ್ಲಿ ನಾಲ್ವರು ಮೃತಪಟ್ಟಿದ್ದು, ಇಬ್ಬರು ಡಿಸ್ಚಾರ್ಜ್‌ ಆಗಿದ್ದಾರೆ. 65 ಸಕ್ರಿಯ ಪ್ರಕರಣಗಳು ದಾವಣಗೆರೆಯಲ್ಲಿವೆ. ಅವಳಿ ತಾಲೂಕಿನ ಜನರು ಅನಗತ್ಯವಾಗಿ ಮನೆಯಿಂದ ಹೊರ ಬರುವುದನ್ನು ನಿಲ್ಲಿಸಬೇಕೆಂದು ಮನವಿ ಮಾಡಿದರು.

ಲಾಕ್‌ಡೌನ್‌ನಿಂದ ಅವಳಿ ತಾಲೂಕುಗಳ ಸಾಕಷ್ಟು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಏಪ್ರಿಲ್‌ 14 ರಿಂದ ಪ್ರತಿನಿತ್ಯ ಮೂರರಿಂದ ನಾಲ್ಕು ಸಾವಿರ ಜನರಿಗೆ ದಾಸೋಹ ವ್ಯವಸ್ಥೆ
ಮಾಡಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next