Advertisement

ದೇಶವನ್ನು ದುರ್ಬಲಗೊಳಿಸಲು ಬಿಡುವುದಿಲ್ಲ : ದಿನೇಶ್ ಗುಂಡೂರಾವ್ ಕಿಡಿ

05:06 PM Dec 29, 2021 | Vishnudas Patil |

ಪಣಜಿ: ಕಾಂಗ್ರೆಸ್ ಪಕ್ಷವನ್ನು ನಾಶಪಡಿಸಲು ಪ್ರಯತ್ನಿಸಿದರೆ, ನಮ್ಮ ದೇಶವನ್ನು ದುರ್ಬಲಗೊಳಿಸಲು ಪ್ರಯತ್ನಿಸಿದರೆ ಅದಕ್ಕೆ ನಾವು ಬಿಡುವುದಿಲ್ಲ , ಜನರ ಧ್ವನಿಯನ್ನು ಮೌನಗೊಳಿಸಲು ಬಿಡುವುದಿಲ್ಲ ಎಂದು ಗೋವಾ ಕಾಂಗ್ರೆಸ್ ಪ್ರಭಾರಿ ದಿನೇಶ್ ಗುಂಡೂರಾವ್ ನುಡಿದರು.

Advertisement

ಪಣಜಿಯಲ್ಲಿ ಕಾಂಗ್ರೆಸ್ ನ 137 ನೇಯ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಜನರು ಇಂದು ಮಾತನಾಡಲು, ಅಭಿಪ್ರಾಯ ವ್ಯಕ್ತಪಡಿಸಲು ಭಯಪಡುವ ಸ್ಥಿತಿ ಬಿಜೆಪಿ ನಿರ್ಮಾಣಮಾಡಿದೆ. ಆಡಳಿತ ಪಕ್ಷದ ಇಚ್ಛೆಗೆ ವಿರುದ್ಧವಾಗಿ ಮಾತನಾಡಿದರೆ ದಾಳಿ, ಅವಮಾನ ಎದುರಿಸಬೇಕಾಗುತ್ತದೆ ಎಂಬುದು ಜನತೆಗೆ ಗೊತ್ತಿದೆ. ಹೀಗಾಗಿ ಅನ್ಯಾಯದ ವಿರುದ್ಧ ಧ್ವನಿಯೆತ್ತುತ್ತಿಲ್ಲ ಎಂದು ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಈ ಸಂದರ್ಭದಲ್ಲಿ ಗೋವಾ ಪ್ರದೇಶ ಕಾಂಗ್ರೆಸ್ ಸಮೀತಿ ಅಧ್ಯಕ್ಷ ಗಿರೀಶ್ ಚೋಡಕರ್, ಕಾಂಗ್ರೆಸ್ ಹಿರಿಯ ನಾಯಕ ಪ್ರತಾಪಸಿಂಹ ರಾಣೆ, ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next