Advertisement

ಆಕ್ರೋಶದ ಬೆನ್ನಲ್ಲೆ ಸಚಿವ ತಮ್ಮಣ್ಣಗೆ ಬುದ್ಧಿ ಹೇಳಿದ ಸಿಎಂ !

09:11 AM Jun 10, 2019 | Team Udayavani |

ಬೆಂಗಳೂರು: ಅಭಿವೃದ್ಧಿ ಕೆಲಸಕ್ಕೆ ನಾವು, ಮತ ಹಾಕಲಿಕ್ಕೆ ಅವರು ಎಂದು ಜನರ ವಿರುದ್ಧ ಹರಿಹಾಯ್ದಿದ್ದ ಸಚಿವ ಡಿ.ಸಿ.ತಮ್ಮಣ್ಣ ಅವರಿಗೆ ಮುಖ್ಯಮಂತ್ರಿ ಬುದ್ಧಿವಾದ ಹೇಳಿದ್ದಾರೆ.

Advertisement

ಸಚಿವರ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಕುಮಾರಸ್ವಾಮಿ ಅವರು ಟ್ವೀಟ್‌ವೊಂದನ್ನು ಮಾಡಿದ್ದಾರೆ.

ಚುನಾವಣೆ ರಾಜಕೀಯವನ್ನು ಅಭಿವೃದ್ಧಿಯೊಂದಿಗೆ ಬೆರೆಸುವುದು ಸೂಕ್ತವಲ್ಲ. ಜನಪ್ರತಿನಿಧಿಗಳಾದ ಹಾಗೂ ಮಂತ್ರಿ ಮಂಡಲದಲ್ಲಿ ಸ್ಥಾನ ಪಡೆದಿರುವ ನಾವೆಲ್ಲರೂ ಪಕ್ಷಾತೀತವಾಗಿ ಜನರ ರಾಜಕೀಯ ಒಲವನ್ನು ಪರಿಗಣಿಸದೆ ಒಟ್ಟಾಗಿ ಅಖಂಡ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಶ್ರಮಿಸೋಣ. ಇದೇ ಪ್ರಜಾಪ್ರಭುತ್ವದ ಸತ್ವ ಸಾರ! ಎಂದು ಬರೆದಿದ್ದಾರೆ.

ಮದ್ದೂರಿನಲ್ಲಿ ಸಚಿವ ತಮ್ಮಣ್ಣ ಅವರು ಅಭಿವೃದ್ಧಿ ಕಾರ್ಯಕ್ಕಾಗಿ ಕೇಳಿದ ಜನರ ವಿರುದ್ಧ ಹರಿಹಾಯ್ದಿದ್ದರು.ಸಚಿವರ ವರ್ತನೆಯನ್ನುಸಂಸದೆ ಸುಮಲತಾ ಸೇರಿದಂತೆ ಹಲವರು ಖಂಡಿಸಿದ್ದರು.

ವ್ಯಾಪಕ ಖಂಡನೆ ವ್ಯಕ್ತವಾದ ಹಿನ್ನಲೆಯಲ್ಲಿ ಸಿಎಂ ಆಕ್ರೋಶ ತಣ್ಣಗಾಗಿಸಿಲು ಟ್ವೀಟ್‌ ಮೂಲಕ ಯತ್ನಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next