Advertisement

Tumkur; ನನ್ನನ್ನು ಬರಿಗೈಯಲ್ಲಿ ಕಳುಹಿಸಬೇಡಿ: ಸೋಮಣ್ಣ

12:08 AM Mar 19, 2024 | Team Udayavani |

ತುಮಕೂರು: ನಾನೂ ನಿಮ್ಮವನಾಗಿ ತುಮಕೂರಿನಲ್ಲಿಯೇ ಇರುತ್ತೇನೆ. ನಿಮ್ಮ ಧ್ವನಿಗೆ ಧ್ವನಿಯಾರುತ್ತೇನೆ. ನನ್ನನ್ನು ಬರಿಗೈಯಲ್ಲಿ ಕಳುಹಿಸಬೇಡಿ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಸೋಮಣ್ಣ ಮನವಿ ಮಾಡಿದರು.

Advertisement

ತುಮಕೂರಿನ ತಿಗಳ ಸಮುದಾಯದ ಮುಖಂಡರ ಮನೆಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ನಾನು ತುಮಕೂರನ್ನು ಬಯಸಿದವನಲ್ಲ. ವಿಧಿ ನನ್ನನ್ನು ಸಿದ್ಧಗಂಗಾ ಸ್ವಾಮೀಜಿಗಳ ಪಾದಗಳಿಗೆ ಅರ್ಪಿಸಿದೆ. ನನ್ನ ರಾಜಕೀಯ ಜೀವನದಲ್ಲಿ ಧ್ವನಿ ಇಲ್ಲದ ಸಮುದಾಯಗಳಿಗೆ ಧ್ವನಿಯಾಗಿ ಕೆಲಸ ಮಾಡಿದ್ದೇನೆ ಎಂದು ಹೇಳಿದರು.

ರಾಜಕೀಯ ಜೀವನದಲ್ಲಿ ನಾನು ಹಲವಾರು ಏಳುಬೀಳುಗಳನ್ನು ಕಂಡಿದ್ದೇನೆ. ಎಲ್ಲರೂ ನಮ್ಮವರು ಎನ್ನುವ ಭಾವನೆ ನನ್ನದು. ನಮ್ಮ ಜನಾಂಗವೇ ಇಲ್ಲದ ಕಡೆ ಜನರ ವಿಶ್ವಾಸ ಗಳಿಸಿಕೊಂಡು ಏಳು ಬಾರಿ ಗೆಲುವು ಸಾಧಿಸಿದ್ದೇನೆ. ಇಲ್ಲಿನ ಪರಿಸ್ಥಿತಿಯನ್ನು ಗಮನಿಸಿದ್ದೇನೆ. ಇಲ್ಲಿ ಭಾರೀ ಬದಲಾವಣೆ ಆಗಬೇಕಾಗಿದೆ ಎಂದು ಸೋಮಣ್ಣ ತಿಳಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next