Advertisement

Fraud: ಚೈತ್ರಾ ಜತೆ ಕುಂದಾಪುರದ ಹೆಸರು ಬಳಸಬೇಡಿ: ಕೋರ್ಟ್‌ಗೆ ಅರ್ಜಿ

11:44 PM Sep 22, 2023 | Team Udayavani |

ಬೆಂಗಳೂರು: ವಂಚನೆ ಆರೋಪಿ ಚೈತ್ರಾ ಹೆಸರಿನ ಜತೆಗೆ ಕುಂದಾಪುರ ತಾಲೂಕಿನ ಹೆಸರನ್ನು ಬಳಸದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಬೇಕು ಎಂದು ಕೋರಿ ಬೆಂಗಳೂರಿನ ಹನುಮಂತ ನಗರದ ನಿವಾಸಿ ಗಣೇಶ್‌ ಶೆಟ್ಟಿ ಸಿಟಿ ಸಿವಿಲ್‌ ಕೋರ್ಟ್‌ ಮೊರೆ ಹೋಗಿದ್ದಾರೆ.

Advertisement

ಚೈತ್ರಾ ಜತೆಗೆ “ಕುಂದಾಪುರ’ ಎಂದು ಉಲ್ಲೇಖೀಸಿ ಮಾಧ್ಯಮಗಳು ಸುದ್ದಿ ಪ್ರಕಟಿಸುವುದು ಮತ್ತು ಪ್ರಸಾರ ಮಾಡುವುದರಿಂದ ಕುಂದಾಪುರದ ಘನತೆಗೆ ಘಾಸಿಯಾಗುತ್ತದೆ. ಈ ಒಂದು ಘಟನೆಯಿಂದ ಅಲ್ಲಿನ ಭವಿಷ್ಯದ ಪೀಳಿಗೆಯನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಬಹುದು. ಆದ್ದರಿಂದ ಮಾಧ್ಯಮಗಳು ಕುಂದಾಪುರ ಎಂದು ಉಲ್ಲೇಖೀಸಿರುವ ಸುದ್ದಿ, ವೀಡಿಯೋ, ಲೇಖನ, ಪೋಸ್ಟ್‌. ಲಿಂಕ್‌ಗಳನ್ನು ಶಾಶ್ವತವಾಗಿ ತೆಗೆದುಹಾಕುವಂತೆ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಸೂಚಿಸಬೇಕು ಎಂದು ಮನವಿಯಲ್ಲಿ ಕೋರಿದ್ದಾರೆ.

ತಾನು ಕುಂದಾಪುರದಲ್ಲಿ ಜನಿಸಿದ್ದು, 2021ರಿಂದ ಬಸವನಗುಡಿಯಲ್ಲಿ ಕಾಫಿ ಶಾಪ್‌ ನಡೆಸುತ್ತಿದ್ದೇನೆ. ಕುಂದಾಪುರವು ದೇವಾಲಯ ಮತ್ತು ಪ್ರಕೃತಿ ಚೆಲುವಿನ ಊರು. ಈ ಊರಿನ ಹೆಸರು ಆರೋಪಿಯೊಬ್ಬರ ಹೆಸರಿನ ಕೊನೆಯ ಭಾಗವಾಗಿರುವ ಕಾರಣಕ್ಕೆ ಹಾಳಾಗಬಾರದು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next