Advertisement
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೈತ್ರಿ ಸರ್ಕಾರ ನಡೆಸುತ್ತಿರುವ ಕಾಂಗ್ರೆಸ್-ಜೆಡಿಎಸ್ನವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ ಹೊರತು, ಯಾವುದೇ ಅಭಿವೃದ್ಧಿಕಾರ್ಯ ನಡೆದಿಲ್ಲ.
Related Articles
Advertisement
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ಸಿದ್ದರಾಮಯ್ಯ, ಬಾದಾಮಿಯಲ್ಲಿ ನನ್ನ ವಿರುದ್ಧ 1,600 ಮತಗಳ ಅಂತರದಿಂದ ಗೆದ್ದರು. ಈಗ ಬಾದಾಮಿಯ ಮತದಾರರು ಯಾತಕ್ಕಾದರೂ ಸಿದ್ದರಾಮಯ್ಯರನ್ನು ಗೆಲ್ಲಿಸಿದ್ದೇವೊ ಎನ್ನುವ ಮಾತನ್ನು ಹೇಳುವ ಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.
ಮೈತ್ರಿ ಪಕ್ಷಗಳು ಧೂಳೀಪಟ: ಹಲವು ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಎಲ್ಲಾ ಪಕ್ಷಗಳು ಒಂದಾಗುತ್ತಿದ್ದವು. ಆದರೆ, ಇಂದು ಪರಿಸ್ಥಿತಿ ಬದಲಾಗಿದ್ದು, ಬಿಜೆಪಿಯನ್ನು ಸೋಲಿಸಲು ಎಲ್ಲಾ ಪಕ್ಷಗಳು ಒಂದಾಗುತ್ತಿವೆ. ಮೋದಿ ಎರಡು ಬಾರಿ ಪ್ರಧಾನಿಯಾಗಬೇಕು ಎಂದು ಬೇರೆ ಪಕ್ಷಗಳ ನಾಯಕರೇ ಹೇಳುತ್ತಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಸಭೆಗಳಲ್ಲೂ ಮೋದಿ ಮೋದಿ ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ. ಹೀಗಾಗಿ ಮೋದಿ ಮತ್ತೆ ಪ್ರಧಾನಿಯಾಗಲಿದ್ದು, ಮೈತ್ರಿ ಪಕ್ಷಗಳು ಧೂಳೀಪಟವಾಗುತ್ತವೆ. ಕಾಂಗ್ರೆಸ್ ಸಂಪೂರ್ಣ ನೆಲಕಚ್ಚುತ್ತದೆ ಎಂದು ಶ್ರೀರಾಮುಲು ಭವಿಷ್ಯ ನುಡಿದರು.
ಸಂಸದ ಪ್ರತಾಪ್ಸಿಂಹ, ರಾಜ್ಯ ಬಿಜೆಪಿ ಕಾರ್ಯದರ್ಶಿ ಎಂ.ರಾಜೇಂದ್ರ, ಮಾಜಿ ಶಾಸಕರಾದ ಸಿದ್ದರಾಜು, ಪೊ›.ಕೆ.ಆರ್.ಮಲ್ಲಿಕಾರ್ಜುನಪ್ಪ, ಜಿಲ್ಲಾಧ್ಯಕ್ಷ ಎಂ.ಶಿವಣ್ಣ, ಎಸ್ಟಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಅಪ್ಪಣ್ಣ, ಸ್ಲಂ ಮೋರ್ಚಾ ಕಾರ್ಯದರ್ಶಿ ಕೌಟಿಲ್ಯ ರಘು ಇನ್ನಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಪರಿವಾರ, ತಳವಾರ ಪರಿಶಿಷ್ಟ ವರ್ಗಕ್ಕೆ: ನಾಯಕ ಜನಾಂಗದ ಪರ್ಯಾಯ ಪದಗಳಾದ ಪರಿವಾರ, ತಳವಾರ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಬೇಕೆಂಬ ಈ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಬಿಜೆಪಿ ಈಡೇರಿಸಲಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಂಸದರಾಗಿದ್ದ ಬಿ.ಎಸ್.ಯಡಿಯೂರಪ್ಪ, ಅನಂತಕುಮಾರ್, ಪ್ರತಾಪ್ಸಿಂಹ, ವಿ .ಶ್ರೀನಿವಾಸಪ್ರಸಾದ್, ಶಾಸಕ ಎಸ್.ಎ. ರಾಮದಾಸ್, ಸಿದ್ದರಾಜು, ಎಂ.ಅಪ್ಪಣ್ಣ, ಎಂ.ರಾಮಚಂದ್ರ ಅವರ ಪ್ರಯತ್ನದ ಫಲವಾಗಿ ಲೋಕಸಭೆಯಲ್ಲಿ ಪರಿವಾರ, ತಳವಾರ ವಿಧೇಯಕ ಅನುಮೋದನೆಯಾಗಿದೆ.
ನಾನು ಮತ್ತು ಯಡಿಯೂರಪ್ಪ ಅವರು ದೆಹಲಿಯಲ್ಲಿ 15 ಇಲಾಖೆಗಳನ್ನು ಸುತ್ತಾಡಿ, ಟೇಬಲ್ಗಳಲ್ಲಿ ಪಾಸ್ ಮಾಡಿಸಿದ್ದೆವು. ರಾಜ್ಯಸಭೆಯಲ್ಲಿ ಪಾಸ್ ಮಾಡಿಸುವ ಸಂಧರ್ಭದಲ್ಲಿ ರಾಜ್ಯ ರಾಜಕೀಯಕ್ಕೆ ಮರಳಿದ್ದರಿಂದ ಅದು ಪೂರ್ಣವಾಗಿರಲಿಲ್ಲ.
ಈ ಬಾರಿಯ ಚುನಾವಣೆಯಲ್ಲಿ ವಿ.ಶ್ರೀನಿವಾಸ್ ಪ್ರಸಾದ್ ಹಾಗೂ ಪ್ರತಾಪ್ ಸಿಂಹ ಗೆಲುವು ಸಾಧಿಸಿದ ಬಳಿಕ ಪರಿವಾರ-ತಳವಾರ ಸಮುದಾಯಗಳನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವ ಕೆಲಸ ಮಾಡಲಿದ್ದು, ಜುಲೈ ಅಥವಾ ಆಗಸ್ಟ್ನಲ್ಲಿ ರಾಜ್ಯಸಭೆಯಲ್ಲಿ ವಿಧೇಯಕ್ಕೆ ಅನುಮೋದನೆ ಪಡೆಯಲಾಗುವುದು ಎಂದರು.