Advertisement

ಭಾರತದಲ್ಲೀಗ ಕೋವಿಡ್ 19 ಸೋಂಕು ದ್ವಿಗುಣಗೊಳ್ಳುವ ಪ್ರಮಾಣ 10ದಿನಕ್ಕೆ ಇಳಿಕೆ: ಸಚಿವಾಲಯ

10:06 AM Apr 25, 2020 | Nagendra Trasi |

ನವದೆಹಲಿ:ಸಕಾಲಕ್ಕೆ ಸರಿಯಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ್ದರಿಂದ ಕೋವಿಡ್ 19 ವೈರಸ್ ಹರಡುವುದನ್ನು ಸಮರ್ಥವಾಗಿ ತಡೆಗಟ್ಟುವಲ್ಲಿ ಸಹಕಾರಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದ್ದು, ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರಗಳು ಹೆಚ್ಚಿನ ಗಮನಹರಿಸಬೇಕು ಎಂದು ಕೇಂದ್ರ ಮನವಿ ಮಾಡಿಕೊಂಡಿದೆ.

Advertisement

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24ಗಂಟೆಗಳಲ್ಲಿ 1684 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟು ಕೋವಿಡ್ 19 ಪ್ರಕರಣಗಳ ಸಂಖ್ಯೆ 23,077ಕ್ಕೆ ಏರಿದೆ. 24ಗಂಟೆಯಲ್ಲಿ 491 ಕೋವಿಡ್ 19 ಸೋಂಕಿತ ವ್ಯಕ್ತಿ ಗುಣಮುಖರಾಗಿದ್ದಾರೆ. ಒಟ್ಟು ಈವರೆಗೆ ಗುಣಮುಖರಾದವರ ಸಂಖ್ಯೆ 4,748 ಎಂದು ವಿವರಿಸಿದೆ.

ಇತರ ಪ್ರಮುಖ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಸೋಂಕಿನ ಹರಡುವಿಕೆ ತೀವ್ರತೆ ಇಳಿಕೆಯಾಗಿದ್ದು, ಸೋಂಕು ದ್ವಿಗುಣಗೊಳ್ಳುವ ಪ್ರಮಾಣ 10ದಿನಕ್ಕೆ ಇಳಿದಿದೆ. ಈ ಮೊದಲು ವೈರಸ್ 3.5ದಿನಗಳಿಗೆ ದ್ವಿಗುಣಗೊಳ್ಳುತ್ತಿತ್ತು. ಕೋವಿಡ್ 19 ಸೋಂಕಿತ ವ್ಯಕ್ತಿಗಳು ಶೇ.20.57ರಷ್ಟು ಗುಣಮುಖರಾಗುತ್ತಿದ್ದಾರೆ ಎಂದು ತಿಳಿಸಿದೆ.

ದೇಶಾದ್ಯಂತ 9.45ಲಕ್ಷ ಶಂಕಿತ ಕೋವಿಡ್ 19 ವೈರಸ್ ಸೋಂಕಿತರನ್ನು ಸೂಕ್ಷ್ಮವಾಗಿ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಅಹಮದಾಬಾದ್, ಸೂರತ್, ಹೈದರಾಬಾದ್ ಹಾಗೂ ಚೆನ್ನೈನಲ್ಲಿನ ಪರಿಸ್ಥಿತಿಯನ್ನು ನಿಭಾಯಿಸಲು ಇನ್ನೂ ನಾಲ್ಕು ಅಂತರ್ ಸಚಿವಾಲಯದ ತಂಡಗಳನ್ನು ರಚಿಸಲಾಗಿದೆ ಎಂದು ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next