Advertisement

ಬೇಗ್‌ ಸ್ಪರ್ಧೆ ಅನುಮಾನ?

11:00 PM Nov 17, 2019 | Team Udayavani |

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹರಾಗಿದ್ದ ರೋಷನ್‌ ಬೇಗ್‌ ಅವರು, ಉಪ ಚುನಾವಣೆ ಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರಲು ಆಸಕ್ತಿ ಹೊಂದಿದ್ದ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ನಿರಾಕರಿಸಿದ್ದರಿಂದ ಬೇಸರಗೊಂಡು, ಶನಿವಾರ ರಾತ್ರಿ ತಮ್ಮ ಬೆಂಬಲಿಗರ ಸಭೆ ಕರೆದು, ಸ್ಪರ್ಧಿಸುವ ಕುರಿತು ಚರ್ಚೆ ನಡೆಸಿದ್ದರು. ಅಲ್ಲದೇ ಶಿವಾಜಿನಗರ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಯಾರು ಅಭ್ಯರ್ಥಿ ಯಾಗುತ್ತಾರೆ ಎನ್ನುವುದರ ಮೇಲೆ ತಮ್ಮ ಸ್ಪರ್ಧೆಯ ಬಗ್ಗೆ ನಿರ್ಧರಿಸಲು ತೀರ್ಮಾನಿಸಿದ್ದರು.

ಕಾಂಗ್ರೆಸ್‌, ರಿಜ್ವಾನ್‌ ಅರ್ಷದ್‌ ಅವರನ್ನು ಅಧಿಕೃತ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದು, ಅವರನ್ನು ಸೋಲಿ ಸಬೇಕೆಂದು ರೋಷನ್‌ ಬೇಗ್‌ ಆಲೋಚಿಸಿದ್ದಾರೆ ಎನ್ನಲಾ ಗಿದೆ. ಅದೇ ಕಾರಣಕ್ಕೆ ಈ ಚುನಾವಣೆಗೆ ಸ್ಪರ್ಧಿಸದೇ ಪರೋಕ್ಷವಾಗಿ ಬಿಜೆಪಿ ಅಭ್ಯರ್ಥಿ ಶರವಣ ಅವರಿಗೆ ಬೆಂಬಲ ನೀಡಲು ಆಲೋಚಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ಈ ಬಗ್ಗೆ ಅಧಿಕೃತವಾಗಿ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next