Advertisement

ಇಂದು BSY ಸಭೆ ಅನುಮಾನ?

11:42 PM Aug 16, 2023 | Team Udayavani |

ಬೆಂಗಳೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರು ನಗರ ಶಾಸಕರು ಹಾಗೂ ಸಂಸದರ ಜತೆ ಗುರುವಾರ ನಡೆಯಬೇಕಿದ್ದ ಸಭೆ ಮುಂದೂಡಿಕೆಯಾಗುವ ಸಾಧ್ಯತೆ ಇದೆ. ಸಭೆ ನಡೆಸುವುದಕ್ಕೆ ಒಪ್ಪಿಗೆ ಸೂಚಿಸಿದ್ದ ಯಡಿಯೂರಪ್ಪ ಅವರು ಪುತ್ರ ಬಿ.ವೈ.ರಾಘವೇಂದ್ರ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಸ್ವಕ್ಷೇತ್ರ ಶಿಕಾರಿಪುರದಲ್ಲೇ ಉಳಿದುಕೊಂಡಿದ್ದಾರೆ.

Advertisement

ಗುರುವಾರ ಅವರು ಬೆಂಗಳೂರಿಗೆ ಮರಳುವ ಸಾಧ್ಯತೆ ಕಡಿಮೆ ಇದೆ. ಹೀಗಾಗಿ ಸಭೆ ಮುಂದೂಡಿಕೆ ಯಾಗಬಹುದೆಂದು ಬಿಜೆಪಿ ಮೂಲಗಳು ತಿಳಿಸಿವೆ. ಅನುದಾನ ಹಂಚಿಕೆ, ಬಿಲ್‌ ಬಾಕಿ, ಕಮಿಷನ್‌ ಹಗರಣ, ಲೋಕಸಭಾ ಹಾಗೂ ಬಿಬಿಎಂಪಿ ಚುನಾವಣೆ, ಸರಕಾರದ ವಿರುದ್ಧ ನಡೆಸಬೇಕಿರುವ ಹೋರಾಟ ಸಹಿತ ಅನೇಕ ವಿಷಯಗಳ ಬಗ್ಗೆ ಈ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ಚರ್ಚೆಗಳು ನಡೆದಿದ್ದವು.

 

Advertisement

Udayavani is now on Telegram. Click here to join our channel and stay updated with the latest news.

Next