Advertisement
ಸೆಕ್ಯುರಿಟಿಗೆ ಸಂಬಂಧಿಸಿದ ಟೆಂಡರ್ ನಿರ್ವಹಣೆ ಸಂದರ್ಭ ತಾಂತ್ರಿಕ ಪರಿಶೀಲನೆ ಸಮರ್ಪಕವಾಗಿ ನಡೆಸದೆ ಗುತ್ತಿಗೆಗೆ ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ ಪಾಲಿಕೆಯ ಸಹಾಯಕ ಎಂಜಿನಿಯರ್ ರಾಜೇಶ್ ಕುಮಾರ್ ಹಾಗೂ ಪ್ರಥಮ ದರ್ಜೆ ಸಹಾಯಕ ಪುಷ್ಪರಾಜ್ ಎಚ್. ಅಮಾನತುಗೊಂಡಿದ್ದಾರೆ. ಈ ಮುಖೇನ ಪಾಲಿಕೆ ಒಳಗಿನ ‘ಕಾಣದ ಕೆಲಸ’ ದ ವಿಚಾರ ಬಯಲಿಗೆ ಬಂದಿದ್ದು, ಇಂತಹ ಇನ್ನಷ್ಟು ಪ್ರಕರಣಗಳು ಪಾಲಿಕೆಯಲ್ಲಿ ನಡೆದಿವೆ ಎಂಬ ಬಗ್ಗೆ ಚರ್ಚೆ ಶುರುವಾಗಿದೆ.
Related Articles
Advertisement
ಅದರಂತೆ ಪೊಲೀಸ್ ಇಲಾಖೆಯ ಪರವಾನಿಗೆ ಪತ್ರ ಸಲ್ಲಿಸಬೇಕಾಗಿತ್ತು. ಆದರೆ ಮಂಗಳೂರಿನಲ್ಲಿ ವ್ಯವಹಾರ ನಡೆಸಲು ಬೇಕಾದ ಪೊಲೀಸ್ ಇಲಾಖೆಯಿಂದ ಯಾವುದೇ ಪರವಾನಿಗೆಯನ್ನು ಅಂಗೀಕೃತಗೊಂಡ ಬಿಡ್ದಾರರು ಹೊಂದಿಲ್ಲ. ಆದರೆ, ಈ ಟೆಂಡರ್ನಲ್ಲಿ ಸಲ್ಲಿಸಿರುವ ದಾಖಲೆಗಳನ್ನು ಸಮರ್ಪಕವಾಗಿ ತಾಂತ್ರಿಕ ಪರಿಶೀಲನೆ ನಡೆಸದೆ ಉದ್ದೇಶಪೂರ್ವಕವಾಗಿ ಮೇಲಧಿಕಾರಿಗಳ ಗಮನಕ್ಕೂ ತಾರದೆ ತಾಂತ್ರಿಕವಾಗಿ ಅರ್ಹತೆ ಹೊಂದಿರುವಾಗಿ ಶಿಪಾರಸ್ಸು ಮಾಡಿರುವುದು ಗಂಭೀರ ಕರ್ತವ್ಯ ಲೋಪ ಎಂದು ಆರೋಪಿಸಿ ಇಬ್ಬರು ಅಧಿಕಾರಿಗಳನ್ನು ಪಾಲಿಕೆ ಆಯುಕ್ತರು ಅಮಾನತುಗೊಳಿಸಿದ್ದಾರೆ.
ಇಬ್ಬರು ಅಮಾನತು, ಇಬ್ಬರಿಗೆ ಶೋಕಾಸ್ ನೋಟೀಸ್
ಟೆಂಡರ್ನಲ್ಲಿ ಕರ್ತವ್ಯ ಲೋಪ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಜತೆಗೆ ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ಗಳಿಗೆ ಶೋಕಾಸ್ ನೋಟೀಸ್ ನೀಡಲಾಗಿದೆ. ವಿಚಾರಣೆ ವೇಳೆ ಅವರ ಹೇಳಿಕೆ ಪಡೆದು ತಪ್ಪಿದ್ದರೆ ಅವರ ವಿರುದ್ದವೂ ಕ್ರಮ ಕೈಗೊಳ್ಳಲಾಗುವುದು. – ಅಕ್ಷಯ್ ಶ್ರೀಧರ್, ಆಯುಕ್ತರು,ಮಹಾನಗರ ಪಾಲಿಕೆ