Advertisement

ಅಂಬೇಡ್ಕರ್‌ ವಿಶ್ವಚೇತನ

05:00 PM Apr 15, 2020 | Suhan S |

ಕೊಳ್ಳೇಗಾಲ :ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್‌ ಒಂದು ವರ್ಗದ ನಾಯಕರಲ್ಲ, ವಿಶ್ವಚೇತನ ಎಂದು ಶಾಸಕ ಎನ್‌. ಮಹೇಶ್‌ ಹೇಳಿದರು. ತಾಲೂಕು ಕಚೇರಿಯ ಆವರಣದಲ್ಲಿ ಏರ್ಪಡಿಸಿದ್ದ ಡಾ.ಅಂಬೇಡ್ಕರ್‌ 129ನೇ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ಕೋವಿಡ್ 19 ಲಾಕ್‌ಡೌನ್‌ ಪಾಲನೆಯಿಂದ ಕಾರ್ಯಕ್ರಮ ಸರಳವಾಗಿ ಆಚರಿಸಲಾಗುತ್ತಿದೆ ಎಂದರು.

Advertisement

ಅಂಬೇಡ್ಕರ್‌ ಸ್ಮಾರಕ ಸಂಘದ ಅಧ್ಯಕ್ಷ ನಟರಾಜು ಮಾತನಾಡಿ, ಸ್ಮಾರಕ ಸಂಘದವತಿಯಿಂದ ಕೊರೊನಾ ತಡೆಗೆ ಹಗಲಿರುಳು ಶ್ರಮಿಸುತ್ತಿರುವ ನಾಲ್ವರು ವೈದ್ಯರು, ನಾಲ್ವರು ಪೌರ ಕಾರ್ಮಿಕರು, ನಾಲ್ವರು ಪೊಲೀಸ್‌ ಅಧಿಕಾರಿಗಳನ್ನು ಸನ್ಮಾನಿಸುತ್ತಿರುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಕುನಾಲ್‌, ಇಒ ಪ್ರಕಾಶ್‌, ಸಮಾಜ ಕಲ್ಯಾಣಾಧಿಕಾರಿ ಗಂಗಾಧರ್‌, ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಸಿದ್ದರಾಜು, ಸರ್ಕಲ್‌ ಇನ್ಸ್‌ಪೆಕ್ಟರ್‌ ಶ್ರೀಕಾಂತ್‌, ಎಸೈಗಳಾದ ರಾಜೇಂದ್ರ, ಅಶೋಕ್‌, ಜಿಲ್ಲಾ ಛಲವಾದಿ ಮಹಾಸಭಾ ಅಧ್ಯಕ್ಷ ಅಣಗಳ್ಳಿ ಬಸವರಾಜು ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next